ವಾಟ್ಸ್ ಆ್ಯಪ್ ಗೆ ಸರಕಾರ ಖಡಕ್ ಎಚ್ಚರಿಕೆ..! ಏನಿದು?

Date:

ಹೊಸದಿಲ್ಲಿ: ವಿವಾದಿತ ಪ್ರೈವಸಿ ಪಾಲಿಸಿ ಅಪ್ಡೇಟ್‌ನ್ನು ಹಿಂಪಡೆಯುವಂತೆ ವಾಟ್ಸಾಪ್‌ಗೆ ಸರಕಾರ ಸೂಚಿಸಿದೆ. ಭಾರತೀಯ ಬಳಕೆದಾರರ ಮಾಹಿತಿಯ ಗೌಪ್ಯತೆ ಮತ್ತು ದತ್ತಾಂಶ ಸುರಕ್ಷತೆಯನ್ನು ಕಾಪಾಡುವಂತೆ ಸರಕಾರ ಹೇಳಿದೆ.

ಈ ನೀತಿಯನ್ನು ಫೇಸ್‌ಬುಕ್ ಒಡೆತನದ ವಾಟ್ಸಾಪ್‌ ಅನಾವರಣಗೊಳಿಸಿದ ಬಗ್ಗೆ ಸರಕಾರ ಅಸಮಾಧಾನ ವ್ಯಕ್ತಪಡಿಸಿದೆ. ಈ ವಿಷಯದ ಬಗ್ಗೆ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕಂಪನಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ವಾಟ್ಸಾಪ್‌ ಸಿಇಒ ವಿಲ್‌ ಕ್ಯಾಥ್‌ಕಾರ್ಟ್‌ಗೆ ಪತ್ರ ಬರೆಯಲಾಗಿದೆ. ಅಪ್ಡೇಟ್‌ ಮತ್ತು ಫೇಸ್‌ಬುಕ್‌ನೊಂದಿಗಿನ ಡೇಟಾ-ಹಂಚಿಕೆ ಭಾರತೀಯ ಬಳಕೆದಾರರನ್ನು ಹೆಚ್ಚಿನ ಭದ್ರತಾ ಅಪಾಯಗಳು ಮತ್ತು ದೋಷಗಳಿಗೆ ಒಡ್ಡುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಇದರ ಜತೆಗೆ, ‘ಒಂದೋ ನೀತಿಯನ್ನು ಒಪ್ಪಿಕೊಳ್ಳಿ, ಇಲ್ಲವೇ ವಾಟ್ಸಾಪ್‌ನ್ನು ತೊರೆಯಿರಿ’ ಎಂಬ ಕಂಪನಿಯ ಹಠಮಾರಿ ಧೋರಣೆಯ ಬಗ್ಗೆಯೂ ಸರಕಾರ ಅಸಮಧಾನ ವ್ಯಕ್ತಪಡಿಸಿದೆ.

 

Share post:

Subscribe

spot_imgspot_img

Popular

More like this
Related

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...