ಎಚ್.ಎಸ್.ದೊರೆಸ್ವಾಮಿ ನಿಧನಕ್ಕೆ ಬಿಎಸ್‌ವೈ ಕಂಬನಿ

Date:

ಎಚ್.ಎಸ್.ದೊರೆಸ್ವಾಮಿ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿಯವರದ್ದು ಬಹುಮುಖಿ ವ್ಯಕ್ತಿತ್ವ. ದೇಶದ ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಇತ್ತೀಚಿನವರೆಗೂ ಅವರು ಕೈಗೊಂಡ ಜನಪರ ಹೋರಾಟದವರೆಗೂ ಸಾಗಿದ ಅವರ ಸುದೀರ್ಘ ಬದುಕು ಅಪೂರ್ವವಾದುದು.

ಮಹಾತ್ಮಾ ಗಾಂಧಿಯವರ ಅನುಯಾಯಿಯಾಗಿ , ಅವರ ಚಿಂತನೆಗಳ ಹಾದಿಯಲ್ಲಿಯೇ ನಡೆದವರು. ನಮ್ಮ ನಡುವೆ ಇದ್ದ ಮಹಾತ್ಮ ಗಾಂಧಿಯವರ ಕೊನೆಯ ಕೊಂಡಿಯಂತಿದ್ದರು. ಕರ್ನಾಟಕ ಏಕೀಕರಣಕ್ಕಾಗಿಯೂ ದುಡಿದ ಅವರು ಸರಳತೆ,ಸಜ್ಜನಿಕೆಯ ಸಾಕಾರ ಮೂರ್ತಿಯಾಗಿ, ಕರ್ನಾಟಕದ ಸಾಕ್ಷಿಪ್ರಜ್ಞೆಯಂತಿದ್ದರು.

ಅವರ ನಿಧನದಿಂದಾಗಿ ಅಪ್ರತಿಮ ಹೋರಾಟಗಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...