ಎಡಗೈ ಸಮುದಾಯದವರ 35 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ: ಮುಖ್ಯಮಂತ್ರಿ ಚಂದ್ರು!

Date:

ಎಡಗೈ ಸಮುದಾಯದವರ 35 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ: ಮುಖ್ಯಮಂತ್ರಿ ಚಂದ್ರು!

ಬೆಂಗಳೂರು:-ಒಳಮೀಸಲಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು ಸ್ವಾಗತಾರ್ಹ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಒಳಗೆ ಒಳಮೀಸಲಾತಿ ಕಲ್ಪಿಸಬೇಕು ಎಂಬ ಎಡಗೈ ಸಮುದಾಯದವರ 35 ವರ್ಷಗಳ ಹೋರಾಟಕ್ಕೆ ಕಡೆಗೂ ಜಯ ಸಿಕ್ಕಿದ್ದು, ಮಂತ್ರಿಮಂಡಲ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ ಸಂಗತಿ.

ಈ ಮೂಲಕ ಎಲ್ಲಾ ಹೋರಾಟಗಾರರಿಗೂ ಪಕ್ಷದ ವತಿಯಿಂದ ಅಭಿನಂದನೆ. ನ್ಯಾ. ಸದಾಶಿವ ವರದಿ ಆಯೋಗವನ್ನು ಯಥಾವತ್ತಾಗಿ ಅಳವಡಿಸದ ಕಾರಣದಿಂದ ಅಲೆಮಾರಿ ಹಾಗೂ ಇನ್ನಿತರ ಧ್ವನಿ ಇಲ್ಲದ ಸಣ್ಣ ಸಣ್ಣ ಜಾತಿಗಳಿಗೆ ಒಳಮೀಸಲಾತಿಯ ಲಾಭ ದಕ್ಕುವುದಿಲ್ಲವೆಂಬ ಭಾವನೆಯೂ ಸಹ ಇದೆ ಎಂದು ತಿಳಿಸಿದರು.

ಮುಂಬರುವ ದಿನಗಳಲ್ಲಿ ಬಾಕಿ ಇರುವ ಎಲ್ಲ ನೇಮಕಾತಿಗಳು, ಮುಂಬಡ್ತಿಗಳು ವೇಗದಲ್ಲಿ ಆಗಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡಗಳು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಸಬಲೀಕರಣಗೊಳ್ಳಲು ಸರ್ಕಾರವು ಪರಿಶಿಷ್ಟರಿಗೆ ಮೀಸಲಿಟ್ಟಿರುವ ಹಣವನ್ನು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಆಮೂಲಾಗ್ರವಾಗಿ ಬದಲಾವಣೆಗಳನ್ನು ತರಲು ಬಳಸಬೇಕಿದೆ ಎಂದು ಒತ್ತಾಯಿಸಿದರು.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು, ಮಾರ್ಚ್...

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...