ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಪ್ರಯೋಜನ

Date:

ನವದೆಹಲಿ: ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಪ್ರಯೋಜನಗಳ ವಿಸ್ತರಿಸಣೆ ಮಾಡಲಾಗುತ್ತದೆ. ಬಾಡಿಗೆ ಮನೆಗಳು, ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಹೊಸ ಮನೆಯನ್ನು ಖರೀದಿಸಲು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ನೆರವು ನೀಡಲಾಗುತ್ತದೆ ಎಂದು ತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ-ಜನ ಆರೋಗ್ಯ ಯೋಜನೆ (AB-PMJAY) ವಿಶ್ವದಲ್ಲೇ ಅತಿ ದೊಡ್ಡ ಸಾರ್ವಜನಿಕ ನಿಧಿಯ ಆರೋಗ್ಯ ವಿಮಾ ಯೋಜನೆಯಾಗಿದ್ದು, ದ್ವಿತೀಯ ಮತ್ತು ತೃತೀಯ ಆರೈಕೆಗಾಗಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂ.ಗಳನ್ನು ಒದಗಿಸುತ್ತದೆ. ಕಳೆದ ವರ್ಷ ಡಿಸೆಂಬರ್ 27ರವರೆಗೆ 12 ಕೋಟಿ ಕುಟುಂಬಗಳಿಗೆ ಸೇರಿದ 55 ಕೋಟಿ ಜನ ಈ ಯೋಜನೆಗೆ ಒಳಪಟ್ಟಿದ್ದರು.
ಭಾರತೀಯ ಆರ್ಥಿಕತೆ ಕಳೆದ ಒಂದು ದಶಕದಲ್ಲಿ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ. 2014ರಿಂದ ಭಾರತ ದೈತ್ಯ ಸವಾಲುಗಳನ್ನು ಎದುರಿಸಿತ್ತು. ಆದರೆ ಸರ್ಕಾರ ಈ ಅಡೆತಡೆಗಳನ್ನು ನಿವಾರಿಸಿದೆ ಮತ್ತು ರಚನಾತ್ಮಕ ಸುಧಾರಣೆಗಳನ್ನು ಪ್ರಾರಂಭಿಸಿದೆ. ಜನಪರ ಸುಧಾರಣೆಗಳಿಗೆ ಒತ್ತು ನೀಡಲಾಗಿದೆ. ಉದ್ಯೋಗ ಸೃಷ್ಟಿ ಮತ್ತು ಉದ್ಯಮಶೀಲತೆಗಳನ್ನು ಉತ್ತೇಜಿಸಲಾಗಿದೆ. ಅಭಿವೃದ್ಧಿ ಉಪಕ್ರಮಗಳು ಬೃಹತ್ ಪ್ರಮಾಣದಲ್ಲಿ ಜನರನ್ನು ತಲುಪಿವೆ ಎಂದು ನಿರ್ಮಲಾ ನುಡಿದರು.

Share post:

Subscribe

spot_imgspot_img

Popular

More like this
Related

ಹೆಂಡತಿಯ 2ನೇ ಮದುವೆ ಸಂಭ್ರಮದ ಬೆನ್ನಲ್ಲೇ ಗಂಡನ ಶವ ಹೊರಕ್ಕೆ!

ಹೆಂಡತಿಯ 2ನೇ ಮದುವೆ ಸಂಭ್ರಮದ ಬೆನ್ನಲ್ಲೇ ಗಂಡನ ಶವ ಹೊರಕ್ಕೆ! ತುಮಕೂರು: ಗಂಡ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನವದೆಹಲಿ: ಧಾರವಾಡ...

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್!

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್! ಬೆಂಗಳೂರು: ಡಿಜಿ...

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ...