ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ ಕಿಡಿ

Date:

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ ಕಿಡಿ

ಮಂಡ್ಯ: ದೀಪಾವಳಿ ಗಿಫ್ಟ್‌ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಜನರನ್ನು ಮೋಸಗೊಳಿಸುತ್ತಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮಂಡ್ಯ ನಗರದ ಸಂಜಯ್‌ ವೃತ್ತದಲ್ಲಿ ಆಟೋ ನಿಲ್ದಾಣ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು,“ದೀಪಾವಳಿ ಕೊಡುಗೆ ಅಂದರೆ ಜನರು ಖುಷಿಯಾಗಬೇಕು. ಆದರೆ ಈ ಸರ್ಕಾರ ಜನರ ಕಿಸೆಯಲ್ಲೇ ಕೈ ಹಾಕಿದೆ. ಎ-ಖಾತಾ ಸೋಗಿನಲ್ಲಿ ಸುಮಾರು 15 ಸಾವಿರ ಕೋಟಿ ರೂಪಾಯಿ ಸುಲಿಗೆ ಮಾಡ್ತಿದೆ,” ಎಂದು ಗರಂ ಆಗಿ ಹೇಳಿದರು.

ಕುಮಾರಸ್ವಾಮಿ ಮುಂದುವರಿದು,
“ಎ-ಖಾತಾ ಪರಿವರ್ತನೆಗೆ ಅರ್ಜಿ ಹಾಕೋದಕ್ಕೆ 500 ರೂ. ಶುಲ್ಕದ ಹೆಸರಿನಲ್ಲಿ ಕೋಟಿ ಕೋಟಿ ರೂಪಾಯಿ ವಸೂಲಿ ನಡೆಯುತ್ತಿದೆ. 30×40 ನಿವೇಶನದವರಿಂದ ಲಕ್ಷಾಂತರ ರೂಪಾಯಿ ಕಿತ್ತುಕೊಳ್ಳಲಾಗುತ್ತಿದೆ. ಮೊದಲು 10-13 ಸಾವಿರ ಕೊಡಬೇಕಿದ್ದವರಿಗೆ ಈಗ ಲಕ್ಷಗಳಲ್ಲಿ ಕಟ್ಟುವ ಪರಿಸ್ಥಿತಿ ಬಂದಿದೆ,” ಎಂದು ಆರೋಪಿಸಿದರು.

“ಗ್ಯಾರಂಟಿ ಕೊಟ್ಟು ಜನರ ಬದುಕು ಸುಲಭ ಮಾಡೋದ್ರ ಬದಲು, ಹೊಸ ತೆರಿಗೆ ಹಾಕಿ ಜನರ ಮೆಲೆ ಬಾಧೆ ಹೆಚ್ಚಿಸುತ್ತಿದೆ. ಈ ಸರ್ಕಾರದ ಗುರಿ ಜನ ಸೇವೆ ಅಲ್ಲ, ದುಡ್ಡು ಮಾಡೋದು,” ಎಂದು ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್ ನವದೆಹಲಿ: ನವೆಂಬರ್...

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ ಸ್ಯಾಂಡಲ್‌ವುಡ್‌ನ ಖ್ಯಾತ ನಟ...

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಜಾ

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ...