ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ ಕಿಡಿ

Date:

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ ಕಿಡಿ

ಮಂಡ್ಯ: ದೀಪಾವಳಿ ಗಿಫ್ಟ್‌ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಜನರನ್ನು ಮೋಸಗೊಳಿಸುತ್ತಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮಂಡ್ಯ ನಗರದ ಸಂಜಯ್‌ ವೃತ್ತದಲ್ಲಿ ಆಟೋ ನಿಲ್ದಾಣ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು,“ದೀಪಾವಳಿ ಕೊಡುಗೆ ಅಂದರೆ ಜನರು ಖುಷಿಯಾಗಬೇಕು. ಆದರೆ ಈ ಸರ್ಕಾರ ಜನರ ಕಿಸೆಯಲ್ಲೇ ಕೈ ಹಾಕಿದೆ. ಎ-ಖಾತಾ ಸೋಗಿನಲ್ಲಿ ಸುಮಾರು 15 ಸಾವಿರ ಕೋಟಿ ರೂಪಾಯಿ ಸುಲಿಗೆ ಮಾಡ್ತಿದೆ,” ಎಂದು ಗರಂ ಆಗಿ ಹೇಳಿದರು.

ಕುಮಾರಸ್ವಾಮಿ ಮುಂದುವರಿದು,
“ಎ-ಖಾತಾ ಪರಿವರ್ತನೆಗೆ ಅರ್ಜಿ ಹಾಕೋದಕ್ಕೆ 500 ರೂ. ಶುಲ್ಕದ ಹೆಸರಿನಲ್ಲಿ ಕೋಟಿ ಕೋಟಿ ರೂಪಾಯಿ ವಸೂಲಿ ನಡೆಯುತ್ತಿದೆ. 30×40 ನಿವೇಶನದವರಿಂದ ಲಕ್ಷಾಂತರ ರೂಪಾಯಿ ಕಿತ್ತುಕೊಳ್ಳಲಾಗುತ್ತಿದೆ. ಮೊದಲು 10-13 ಸಾವಿರ ಕೊಡಬೇಕಿದ್ದವರಿಗೆ ಈಗ ಲಕ್ಷಗಳಲ್ಲಿ ಕಟ್ಟುವ ಪರಿಸ್ಥಿತಿ ಬಂದಿದೆ,” ಎಂದು ಆರೋಪಿಸಿದರು.

“ಗ್ಯಾರಂಟಿ ಕೊಟ್ಟು ಜನರ ಬದುಕು ಸುಲಭ ಮಾಡೋದ್ರ ಬದಲು, ಹೊಸ ತೆರಿಗೆ ಹಾಕಿ ಜನರ ಮೆಲೆ ಬಾಧೆ ಹೆಚ್ಚಿಸುತ್ತಿದೆ. ಈ ಸರ್ಕಾರದ ಗುರಿ ಜನ ಸೇವೆ ಅಲ್ಲ, ದುಡ್ಡು ಮಾಡೋದು,” ಎಂದು ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...