ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ ಕಿಡಿ

Date:

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ ಕಿಡಿ

ಮಂಡ್ಯ: ದೀಪಾವಳಿ ಗಿಫ್ಟ್‌ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಜನರನ್ನು ಮೋಸಗೊಳಿಸುತ್ತಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮಂಡ್ಯ ನಗರದ ಸಂಜಯ್‌ ವೃತ್ತದಲ್ಲಿ ಆಟೋ ನಿಲ್ದಾಣ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು,“ದೀಪಾವಳಿ ಕೊಡುಗೆ ಅಂದರೆ ಜನರು ಖುಷಿಯಾಗಬೇಕು. ಆದರೆ ಈ ಸರ್ಕಾರ ಜನರ ಕಿಸೆಯಲ್ಲೇ ಕೈ ಹಾಕಿದೆ. ಎ-ಖಾತಾ ಸೋಗಿನಲ್ಲಿ ಸುಮಾರು 15 ಸಾವಿರ ಕೋಟಿ ರೂಪಾಯಿ ಸುಲಿಗೆ ಮಾಡ್ತಿದೆ,” ಎಂದು ಗರಂ ಆಗಿ ಹೇಳಿದರು.

ಕುಮಾರಸ್ವಾಮಿ ಮುಂದುವರಿದು,
“ಎ-ಖಾತಾ ಪರಿವರ್ತನೆಗೆ ಅರ್ಜಿ ಹಾಕೋದಕ್ಕೆ 500 ರೂ. ಶುಲ್ಕದ ಹೆಸರಿನಲ್ಲಿ ಕೋಟಿ ಕೋಟಿ ರೂಪಾಯಿ ವಸೂಲಿ ನಡೆಯುತ್ತಿದೆ. 30×40 ನಿವೇಶನದವರಿಂದ ಲಕ್ಷಾಂತರ ರೂಪಾಯಿ ಕಿತ್ತುಕೊಳ್ಳಲಾಗುತ್ತಿದೆ. ಮೊದಲು 10-13 ಸಾವಿರ ಕೊಡಬೇಕಿದ್ದವರಿಗೆ ಈಗ ಲಕ್ಷಗಳಲ್ಲಿ ಕಟ್ಟುವ ಪರಿಸ್ಥಿತಿ ಬಂದಿದೆ,” ಎಂದು ಆರೋಪಿಸಿದರು.

“ಗ್ಯಾರಂಟಿ ಕೊಟ್ಟು ಜನರ ಬದುಕು ಸುಲಭ ಮಾಡೋದ್ರ ಬದಲು, ಹೊಸ ತೆರಿಗೆ ಹಾಕಿ ಜನರ ಮೆಲೆ ಬಾಧೆ ಹೆಚ್ಚಿಸುತ್ತಿದೆ. ಈ ಸರ್ಕಾರದ ಗುರಿ ಜನ ಸೇವೆ ಅಲ್ಲ, ದುಡ್ಡು ಮಾಡೋದು,” ಎಂದು ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್!

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್! ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ...

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ: ಸಿಎಂ ಸಿದ್ದರಾಮಯ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ...

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ ಬೆಂಗಳೂರು:...

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು...