ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ ಕಿಡಿ

Date:

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ ಕಿಡಿ

ಮಂಡ್ಯ: ದೀಪಾವಳಿ ಗಿಫ್ಟ್‌ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಜನರನ್ನು ಮೋಸಗೊಳಿಸುತ್ತಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮಂಡ್ಯ ನಗರದ ಸಂಜಯ್‌ ವೃತ್ತದಲ್ಲಿ ಆಟೋ ನಿಲ್ದಾಣ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು,“ದೀಪಾವಳಿ ಕೊಡುಗೆ ಅಂದರೆ ಜನರು ಖುಷಿಯಾಗಬೇಕು. ಆದರೆ ಈ ಸರ್ಕಾರ ಜನರ ಕಿಸೆಯಲ್ಲೇ ಕೈ ಹಾಕಿದೆ. ಎ-ಖಾತಾ ಸೋಗಿನಲ್ಲಿ ಸುಮಾರು 15 ಸಾವಿರ ಕೋಟಿ ರೂಪಾಯಿ ಸುಲಿಗೆ ಮಾಡ್ತಿದೆ,” ಎಂದು ಗರಂ ಆಗಿ ಹೇಳಿದರು.

ಕುಮಾರಸ್ವಾಮಿ ಮುಂದುವರಿದು,
“ಎ-ಖಾತಾ ಪರಿವರ್ತನೆಗೆ ಅರ್ಜಿ ಹಾಕೋದಕ್ಕೆ 500 ರೂ. ಶುಲ್ಕದ ಹೆಸರಿನಲ್ಲಿ ಕೋಟಿ ಕೋಟಿ ರೂಪಾಯಿ ವಸೂಲಿ ನಡೆಯುತ್ತಿದೆ. 30×40 ನಿವೇಶನದವರಿಂದ ಲಕ್ಷಾಂತರ ರೂಪಾಯಿ ಕಿತ್ತುಕೊಳ್ಳಲಾಗುತ್ತಿದೆ. ಮೊದಲು 10-13 ಸಾವಿರ ಕೊಡಬೇಕಿದ್ದವರಿಗೆ ಈಗ ಲಕ್ಷಗಳಲ್ಲಿ ಕಟ್ಟುವ ಪರಿಸ್ಥಿತಿ ಬಂದಿದೆ,” ಎಂದು ಆರೋಪಿಸಿದರು.

“ಗ್ಯಾರಂಟಿ ಕೊಟ್ಟು ಜನರ ಬದುಕು ಸುಲಭ ಮಾಡೋದ್ರ ಬದಲು, ಹೊಸ ತೆರಿಗೆ ಹಾಕಿ ಜನರ ಮೆಲೆ ಬಾಧೆ ಹೆಚ್ಚಿಸುತ್ತಿದೆ. ಈ ಸರ್ಕಾರದ ಗುರಿ ಜನ ಸೇವೆ ಅಲ್ಲ, ದುಡ್ಡು ಮಾಡೋದು,” ಎಂದು ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...