ಏಕಾಏಕಿ ಹೆಚ್ಚಿದ ನದಿ ನೀರು; ಮಧ್ಯದಲ್ಲಿಯೇ ಸಿಲುಕಿದ ವ್ಯಕ್ತಿ!

Date:

ಬಟ್ಟೆ ಒಗೆಯಲು ನದಿಗೆ ಹೋಗಿ,ನೀರಿನ ಮಧ್ಯೆ ಸಿಕ್ಕಿಬಿದ್ದಿದ್ದ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಮಂಡ್ಯ ಜಿಲ್ಲೆ ಮದ್ದೂರಿನ ಶಿಂಷಾನದಿ ಬಳಿ ಘಟನೆ ನಡೆದಿದೆ. ಶಿವಪುರ – ಸೋಮನಹಳ್ಳಿ ಮಧ್ಯದಲ್ಲಿ ಹರಿಯುವ ಶಿಂಷಾ ನದಿ ನೀರಿನ ಪ್ರಮಾಣ ಕಡಿಮೆ ಇದ್ದ ಹಿನ್ನಲೆಯಲ್ಲಿ ವ್ಯಕ್ತಿ ನದಿಯಲ್ಲಿ ಬಟ್ಟೆ ಒಗೆಯಲು ಹೋಗಿದ್ದ ಎನ್ನಲಾಗಿದೆ.ಇದ್ದಕ್ಕಿದ್ದಂತೆ ನದಿ ನೀರು ಹೆಚ್ಚಾಗಿ ಹೊರಬರಲು ಸಾಧ್ಯವಾಗಲಿಲ್ಲ.

ತಮಿಳುನಾಡಿನ ಮೂಲದ ಏಳುಮಲೈ (65) ನದಿಯಲ್ಲಿ ಸಿಲುಕಿದ್ದ ವ್ಯಕ್ತಿ. ಕೋವಿಡ್ ಲಾಕ್ ಡೌನ್ ಸಂದರ್ಭದಿಂದ ಮದ್ದೂರಿನಲ್ಲೆ ಇದ್ದುಕೊಂಡು ಭಿಕ್ಷೆ ನಡೆಸುತ್ತಿದ್ದ ವ್ಯಕ್ತಿ ಏಳುಮಲೈ ನನ್ನು ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ನದಿಗೆ ಇಳಿದು ವ್ಯಕ್ತಿಯನ್ನ ರಕ್ಷಿಸಲಾಗಿದೆ. ರಕ್ಷಣಾ ವ್ಯವಸ್ಥೆ ವೀಕ್ಷಿಸಲು ಜನರು ಸಾಲುಗಟ್ಟಿ ನಿಂತಿದ್ದರಿಂದ 1 ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಆಗಿತ್ತು. ಅಗ್ನಿಶಾಮಕ ಅಧಿಕಾರಿ ಗುರುರಾಜ್ ಹಾಗೂ ಸಿ ಪಿ‌ ಐ ಹರೀಶ್ ನೇತೃತ್ವದ ಪೋಲಿಸ್ ತಂಡ ಕಾರ್ಯಾಚರಣೆ ನಡೆಸಿತ್ತು.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...