ಐಪಿಎಲ್ ನಲ್ಲಿ ಕಷ್ಟ: ಕಣ್ಣೀರು ಹಾಕಿದ ವಿದೇಶಿ ಆಟಗಾರ

Date:

ಏಪ್ರಿಲ್ 9ರಂದು ಆರಂಭವಾಗಿದ್ದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಯಾವುದೇ ಅಡಚಣೆಗಳಿಲ್ಲದೆ 29 ಪಂದ್ಯಗಳನ್ನು ಯಶಸ್ವಿಯಾಗಿ ಪೂರೈಸಿತು. ಆದರೆ ಐಪಿಎಲ್ ಬಯೋಬಬಲ್ ಒಳಗಡೆ ಕೊರೊನಾ ಪ್ರವೇಶಿಸಿ ವಿವಿಧ ತಂಡಗಳ ಕೆಲ ಆಟಗಾರರು ಮತ್ತು ತರಬೇತುದಾರರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಸ್ತುತ ಐಪಿಎಲ್ ಟೂರ್ನಿಯನ್ನು ಮುಂದೂಡಲಾಯಿತು.

ಹೀಗೆ ಕೊರೊನಾ ಸೋಂಕು ದೃಢಪಟ್ಟ ಆಟಗಾರರ ಪೈಕಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಟಿಮ್ ಸೀಫರ್ಟ್ ಕೂಡ ಒಬ್ಬರು. ಐಪಿಎಲ್ ಟೂರ್ನಿ ಮುಂದೂಡಲ್ಪಟ್ಟ ವೇಳೆಯಲ್ಲಿ ನ್ಯೂಜಿಲೆಂಡ್ ತಂಡದ ಆಟಗಾರ ಟಿಮ್ ಸೀಫರ್ಟ್ ವರದಿಯು 2 ಬಾರಿ ನಡೆದ ಕೊವಿಡ್ ಪರೀಕ್ಷೆಯಲ್ಲಿಯೂ ಪಾಸಿಟಿವ್ ಬಂದಿತ್ತು. ಹೀಗಾಗಿ ಟಿಮ್ ಸೀಫರ್ಟ್ ನ್ಯೂಜಿಲೆಂಡ್‌ಗೆ ಪ್ರಯಾಣ ಬೆಳೆಸದೆ ಚೆನ್ನೈನಲ್ಲಿ ಕ್ವಾರಂಟೈನ್‌ಗೆ ಒಳಗಾದರು.

ಇದೀಗ ತನ್ನ ತವರು ದೇಶಕ್ಕೆ ಹಿಂದಿರುಗಿರುವ ಟಿಮ್ ಸೀಫರ್ಟ್ ಮನೆಯಲ್ಲಿಯೇ ಕ್ವಾರಂಟೈನ್‌ಗೆ ಒಳಗಾಗಿದ್ದು ಐಪಿಎಲ್ ವೇಳೆ ಕೊರೊನಾವೈರಸ್ ಕಾರಣದಿಂದ ಭಾರತದಲ್ಲಿ ಕಳೆದ ದಿನಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದ್ದಾರೆ. ಹೀಗೆ ಮಾತನಾಡುವ ವೇಳೆ ಭಾರತದಲ್ಲಿನ ತಮ್ಮ 14 ದಿನಗಳ ಕ್ವಾರಂಟೈನ್‌ನಲ್ಲಿ ಅನುಭವಿಸಿದ ನೋವು ಮತ್ತು ಒತ್ತಾಯವನ್ನು ನೆನೆದು ಟಿಮ್ ಸೀಫರ್ಟ್ ಕಣ್ಣೀರು ಹಾಕಿದ್ದಾರೆ. ಇದೇ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವ್ಯವಸ್ಥಾಪಕರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮಾಡಿದ ಸಹಾಯವನ್ನು ಸಿಫರ್ಟ್ ನೆನಪಿಸಿಕೊಂಡಿದ್ದಾರೆ. ಟಿಮ್ ಸಿಫರ್ಟ್ ಕಣ್ಣೀರು ಹಾಕಿರುವ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...