ಐಪಿಎಲ್ : ಮ್ಯಾಕ್ಸ್‌ವೆಲ್ ರಚಿಸಿದ ಆಲ್ ಟೈಮ್ ತಂಡದಲ್ಲಿ ದೊಡ್ಡ ಆಟಗಾರರಿಗೇ ಸ್ಥಾನವಿಲ್ಲ!

Date:

14ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಏಪ್ರಿಲ್ 9ರಂದು ಚೆನ್ನೈನ ಎಂ ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ. ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಗೆ ಇರುವಷ್ಟು ಬೇಡಿಕೆ ಮತ್ತು ಕ್ರೇಜ್ ಬೇರೆ ಯಾವುದೇ ಫ್ರಾಂಚೈಸಿ ಲೀಗ್‌ಗಳಿಗೂ ಇಲ್ಲ. ಹಲವಾರು ಮಾಜಿ ಕ್ರಿಕೆಟಿಗರು ಮತ್ತು ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸುತ್ತಿರುವ ಹಲವಾರು ಆಟಗಾರರು ತಮ್ಮ ನೆಚ್ಚಿನ ಐಪಿಎಲ್ ಆಡುವ ಬಳಗವನ್ನು ಪ್ರಕಟಿಸುತ್ತಿರುತ್ತಾರೆ.

ಅದೇ ರೀತಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿರುವ ಮ್ಯಾಕ್ಸ್‌ವೆಲ್ ಕೂಡ ತಮ್ಮ ನೆಚ್ಚಿನ ಐಪಿಎಲ್ ಇಲೆವೆನ್ ಪ್ರಕಟಿಸಿದ್ದು ಹಲವಾರು ದಿಗ್ಗಜ ಆಟಗಾರರು ಈ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿಲ್ಲ. ಗ್ಲೆನ್ ಮ್ಯಾಕ್ಸ್‌ವೆಲ್ ಆಯ್ದು ರಚಿಸಿರುವ ಆಲ್ ಟೈಮ್ ಐಪಿಎಲ್ ತಂಡ ಈ ಕೆಳಕಂಡಂತಿದೆ ನೋಡಿ.

ಮ್ಯಾಕ್ಸ್‌ವೆಲ್ ರಚಿಸಿರುವ ಆಲ್ ಟೈಮ್ ಐಪಿಎಲ್ ತಂಡದಲ್ಲಿ ಆರಂಭಿಕ ಆಟಗಾರರಾಗಿ ಡೇವಿಡ್ ವಾರ್ನರ್ ಮತ್ತು ವಿರಾಟ್ ಕೊಹ್ಲಿ ಇದ್ದಾರೆ. ಡಿವಿಲಿಯರ್ಸ್ ಅವರಿಗೆ ಮೂರು ಮತ್ತು ಸುರೇಶ್ ರೈನಾರಿಗೆ ನಾಲ್ಕನೇ ಸ್ಥಾನವನ್ನು ಮ್ಯಾಕ್ಸ್‌ವೆಲ್ ತಮ್ಮ ಆಲ್ ಟೈಮ್ ತಂಡದಲ್ಲಿ ನೀಡಿದ್ದಾರೆ. ಐದನೇ ಸ್ಥಾನಕ್ಕೆ ಸ್ವತಃ ತಮ್ಮನ್ನೇ ಆರಿಸಿರುವ ಮ್ಯಾಕ್ಸ್‌ವೆಲ್ , ಆರನೇ ಆಟಗಾರನನ್ನಾಗಿ ಆ್ಯಂಡ್ರೆ ರಸೆಲ್ ಹಾಗೂ ಏಳನೇ ಕ್ರಮಾಂಕದಲ್ಲಿ ಎಂಎಸ್ ಧೋನಿ ಅವರನ್ನು ಹೆಸರಿಸಿದ್ದಾರೆ ಮತ್ತು ಧೋನಿ ಅವರಿಗೆ ನಾಯಕತ್ವದ ಜವಾಬ್ದಾರಿಯನ್ನೂ ಸಹ ಕೊಟ್ಟಿದ್ದಾರೆ. ಬೌಲಿಂಗ್ ವಿಭಾಗಕ್ಕೆ ಬಂದರೆ ಮ್ಯಾಕ್ಸ್‌ವೆಲ್ ಆರಿಸಿಕೊಂಡಿರುವ ಏಕೈಕ ಸ್ಪಿನ್ನರ್ ಹರ್ಭಜನ್ ಸಿಂಗ್. ಉಳಿದಂತೆ ಮೋಹಿತ್ ಶರ್ಮಾ , ಭುವನೇಶ್ವರ್ ಕುಮಾರ್ ಮತ್ತು ಜಸ್ಪ್ರೀತ್ ಬುಮ್ರಾ ಅವರನ್ನು ಮ್ಯಾಕ್ಸ್‌ವೆಲ್ ತಮ್ಮ ಆಲ್ ಟೈಮ್ ಐಪಿಎಲ್ ತಂಡದಲ್ಲಿ ಘೋಷಿಸಿದ್ದಾರೆ.

ಮ್ಯಾಕ್ಸ್‌ವೆಲ್ ತಮ್ಮ ಈ ಆಲ್ ಟೈಮ್ ಐಪಿಎಲ್ ತಂಡದಲ್ಲಿ ದಿಗ್ಗಜ ಆಟಗಾರರಾದ ಲಸಿತ್ ಮಲಿಂಗಾ, ರೋಹಿತ್ ಶರ್ಮಾ, ಗೌತಮ್ ಗಂಭೀರ್ ಮತ್ತು ಕ್ರಿಸ್ ಗೇಲ್ ಅವರ ಹೆಸರುಗಳನ್ನು ಪರಿಗಣಿಸದೆ ಇರುವುದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

 

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...