No menu items!
22.3 C
Munich
Friday, June 19, 2026

ಐಪಿಎಲ್ ಹರಾಜು: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 14 ಕ್ರಿಕೆಟಿಗರು!

Must read

ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಕರ್ನಾಟಕದ ಒಟ್ಟು 14 ಆಟಗಾರರು ಅದೃಷ್ಟ ಪರೀಸಲಿದ್ದಾರೆ. ಟೀಮ್ ಇಂಡಿಯಾ ಪರ ಆಡಿರುವ ರಾಜ್ಯದ ಬ್ಯಾಟರ್ಗಳಾದ ಮನೀಷ್ ಪಾಂಡೆ ಮತ್ತು ಕರುಣ್ ನಾಯರ್ ತಲಾ 50 ಲಕ್ಷ ರೂ. ಮೂಲಬೆಲೆ ಹೊಂದಿದ್ದಾರೆ. ರಾಜ್ಯದ ಉಳಿದ 12 ಆಟಗಾರರು ತಲಾ 20 ಲಕ್ಷ ರೂ. ಮೂಲಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಲಿ ದೇಶೀಯ ಕ್ರಿಕೆಟ್ ಋತುವಿನಲ್ಲಿ ವಿದರ್ಭಕ್ಕೆ ವಲಸೆ ಹೋಗಿರುವ ಕರುಣ್ ನಾಯರ್,

ವಿಸಿಎ ಕಡೆಯಿಂದ ಹರಾಜಿಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇದೇ ರೀತಿ ಕೇರಳಕ್ಕೆ ವಲಸೆ ಹೋಗಿರುವ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಮತ್ತು ಮಿಜೋರಾಂಗೆ ವಲಸೆ ಹೋಗಿರುವ ಕೆಸಿ ಕಾರ್ಯಪ್ಪ ಕೂಡ ಹರಾಜಿನಲ್ಲಿದ್ದಾರೆ. ಇನ್ನುಳಿದಂತೆ ರಾಜ್ಯ ತಂಡದ ಜೆ. ಸುಚಿತ್, ಶುಭಾಂಗ್ ಹೆಗ್ಡೆ, ನಿಹಾಲ್ ಉಲ್ಲಾಳ್, ಬಿಆರ್ ಶರತ್ ಜತೆಗೆ ಮಹಾರಾಜ ಟ್ರೋಫಿಯಲ್ಲಿ ಮಿಂಚಿರುವ ಮನ್ವಂತ್ ಕುಮಾರ್, ಎಲ್ಆರ್ ಚೇತನ್, ಕೆಎಲ್ ಶ್ರೀಜಿತ್, ಎಂ. ವೆಂಕಟೇಶ್, ಮೋನಿಶ್ ರೆಡ್ಡಿ, ಅಭಿಲಾಷ್ ಶೆಟ್ಟಿ ಹರಾಜಿನಲ್ಲಿದ್ದಾರೆ.

- Advertisement -spot_img

More articles

- Advertisement -spot_img

Latest article