ಒಂಟಿ ಸಲಗ ದಾಳಿಗೆ ಕಾರ್ಮಿಕ ಮಹಿಳೆ ಸಾವು

Date:

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ಜಿಲ್ಲೆಯ ಆಲ್ದೂರು ಸಮೀಪದ ಹೆಡೆದಾಳು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ವೀಣಾ (45) ಎಂದು ಗುರುತಿಸಲಾಗಿದೆ. ಮಹಿಳೆ ಕಾಫಿ ತೋಟಕ್ಕೆ ಕೆಲಸಕ್ಕೆ ಹೋಗುವ ವೇಳೆ ಆನೆ ದಾಳಿ ನಡೆಸಿದೆ. ಈ ವೇಳೆ ಮಹಿಳೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ. ಆದರೆ ಸಾಧ್ಯವಾಗಿಲ್ಲ. ಈ ವೇಳೆ ಆನೆ ದಾಳಿ ನಡೆಸಿ ಮಹಿಳೆಯ ತಲೆಯನ್ನು ತುಳಿದಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಕಳೆದ ಕೆಲವು ದಿನಗಳಿಂದ ಸುಮಾರು 7 ಕಾಡಾನೆಗಳು ಕಾಫಿ ತೋಟದ ಸುತ್ತಮುತ್ತವೇ ಬೀಡು ಬಿಟ್ಟಿವೆ. ಇದರಿಂದ ಗ್ರಾಮಸ್ಥರು ಹಾಗೂ ಕೂಲಿ ಕಾರ್ಮಿಕರು ಓಡಾಡುವುದು ಕಷ್ಟವಾಗಿದೆ. ಆನೆಗಳನ್ನು ಸ್ಥಳದಿಂದ ಓಡಿಸುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಬೆಂಗಳೂರು: ಸಿದ್ದರಾಮಯ್ಯರ...

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ತಿರುವನಂತಪುರ: ವೈವಿಧ್ಯತೆಯ...

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ ವೈರಲ್

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ...

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್ ದೇವನಹಳ್ಳಿ:...