ಒಂದು ಬಿರಿಯಾನಿ ತಿನ್ನಲು ಹೋಗಿ 2 ಲಕ್ಷ ಕಳೆದುಕೊಂಡ ಆಟೋಚಾಲಕ!

Date:

ಆರ್ಥಿಕ ಮುಗ್ಗಟ್ಟಿನಲ್ಲಿದ್ದ ಈ ಆಟೋಚಾಲಕನಿಗೆ ಬಿರಿಯಾನಿ ತಿನ್ನುವ ಆಸೆಯೇ ದುಃಖಕ್ಕೆ ಮೂಲವಾಗಿ ಪರಿಣಮಿಸಿದೆ. ಬಿರಿಯಾನಿ ತಿನ್ನಲೆಂದು ಹೋದ ಈ ಆಟೋಚಾಲಕ 2 ಲಕ್ಷ ರೂಪಾಯಿ ಕಳೆದುಕೊಳ್ಳುವಂತಾಗಿದೆ. ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಇಂಥದ್ದೊಂದು ಘಟನೆ ಸಂಭವಿಸಿದೆ.

 

ಹನುಮಂತರಾಯ ಎಂಬ ಎಂಬ ಆಟೋಚಾಲಕ ಹಣ ಕಳೆದುಕೊಂಡವ. ಸಾಲದ ಹೊರೆ ಎದುರಿಸುತ್ತಿದ್ದ ಈತ ಆ ಭಾರ ಇಳಿಸಿಕೊಳ್ಳಲು ಚಿನ್ನವನ್ನು ಅಡವಿಟ್ಟಿದ್ದ. ಬ್ಯಾಂಕ್​ವೊಂದರಲ್ಲಿ ಚಿನ್ನ ಅಡವಿಟ್ಟು 2 ಲಕ್ಷ ರೂಪಾಯಿ ಸಾಲ ಪಡೆದಿದ್ದ ಈ ಚಾಲಕ, ಆ ಹಣ ಹಿಡಿದುಕೊಂಡು ಬರುತ್ತಿದ್ದಾಗ ಬಿರಿಯಾನಿ ತಿನ್ನಲು ಹೋಗಿದ್ದ.

ಹಣ ಬೈಕ್​ನಲ್ಲಿನ ಸೈಡ್​ ಲಾಕರ್​ನಲ್ಲಿಟ್ಟುಕೊಂಡು ಬಾಮೈದನ ಜೊತೆಗೆ ಮರಳುತ್ತಿದ್ದ ಹನುಮಂತರಾಯ, ಮಾರ್ಗಮಧ್ಯೆ ಬಿರಿಯಾನಿ ತಿನ್ನಲು ದ್ವಿಚಕ್ರವಾಹನ ನಿಲ್ಲಿಸಿದ್ದಾನೆ. ಈತನ ಬೈಕ್​ ಬಳಿ ಸುಳಿದಾಡುತ್ತಿದ್ದ ಕಳ್ಳರು ಆ ಹಣವನ್ನು ಎಗರಿಸಿ ಇನ್ನೊಂದು ಬೈಕ್​ನಲ್ಲಿ ಪರಾರಿ ಆಗಿರುವುದು ಸಿಸಿಟಿವಿ ಕ್ಯಾಮರಾವೊಂದರಲ್ಲಿ ಸೆರೆಯಾಗಿದೆ. ಇತ್ತೀಚೆಗೆ ನಡೆದ ಈ ಕಳ್ಳತನ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳ ಪತ್ತೆಗಾಗಿ ಬ್ಯಾಡರಹಳ್ಳಿ ಠಾಣೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...