ಒಂದು ರವಿಕೆ ವಿಷಯಕ್ಕೆ ಬಿತ್ತು ಪತ್ನಿ ಹೆಣ!

Date:

ಆಸ್ತಿ-ಅಂತಸ್ತಿಗಾಗಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವರದಕ್ಷಿಣೆ ಕಿರುಕುಳ, ಮಾನಸಿಕ ಹಿಂಸೆ, ಸಾಲಬಾಧೆ ಈ ಎಲ್ಲ ಕಾರಣಗಳಿಗಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಘಟನೆಗಳನ್ನು ಕೇಳಿದ್ದೇವೆ. ಆದರೆ, ಪತಿ ತನ್ನ ಇಚ್ಚೆಯಂತೆ ರವಿಕೆ ಹೊಲೆದುಕೊಟ್ಟಿಲ್ಲ ಎಂದು ಬೇಸರಗೊಂಡ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೈದರಾಬಾದ್‍ನಲ್ಲಿ ನಡೆದಿದೆ.

ಶ್ರೀನಿವಾಸ್ ಎಂಬುವವರ ಪತ್ನಿ ವಿಜಯಲಕ್ಷ್ಮಿ (36) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಈ ದಂಪತಿ ಹೈದರಾಬಾದ್‍ನ ಅಂಬರ್‍ಪೇಟೆಯಲ್ಲಿ ವಾಸವಾಗಿದ್ದರು. ಶ್ರೀನಿವಾಸ್ ಟೈಲರ್ ಆಗಿದ್ದು, ಸೀರೆ ವ್ಯಾಪಾರ ಕೂಡ ಮಾಡುತ್ತಿದ್ದರು.

ಶನಿವಾರ ತಮ್ಮ ಪತ್ನಿ ವಿಜಯಲಕ್ಷ್ಮಿಗೆ ರವಿಕೆ ಹೊಲೆದುಕೊಟ್ಟಿದ್ದಾರೆ. ಆದರೆ, ಆಕೆಗೆ ಈ ರವಿಕೆ ಇಷ್ಟವಾಗಿರಲಿಲ್ಲ. ಈ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದೆ. ಬಳಿಕ ವಿಜಯಲಕ್ಷ್ಮಿ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಮಧ್ಯಾಹ್ನ 12.30ಕ್ಕೆ ಮಕ್ಕಳು ಶಾಲೆಯಿಂದ ಮನೆಗೆ ಬಂದು ಬಾಗಿಲು ತಟ್ಟಿದರೂ ಪ್ರತಿಕ್ರಿಯಿಸಿಲ್ಲ.

ಪತಿ ಶ್ರೀನಿವಾಸ್ ಬಾಗಿಲು ಬಡಿದು ನೋಡಿದಾಗ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಶ್ರೀನಿವಾಸ್ ಕೂಡಲೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಂಬರ್‍ಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್ ಬೆಳಗಾವಿ: ಧಾರವಾಡ ಜಿಲ್ಲೆಯ...

ಯಾವ ಪುರುಷಾರ್ಥಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ: ವಿಜಯೇಂದ್ರ ಪ್ರಶ್ನೆ

ಯಾವ ಪುರುಷಾರ್ಥಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ: ವಿಜಯೇಂದ್ರ ಪ್ರಶ್ನೆ ಬೆಳಗಾವಿ: ಮಾನ್ಯ ಮುಖ್ಯಮಂತ್ರಿಗಳೇ,...

ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್ ಕುಮಾರಸ್ವಾಮಿ

ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್...

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳಗಾವಿ: ಕಾಂಗ್ರೆಸ್ ಕುಟುಂಬದವರನ್ನು...