ಬೆಂಗಳೂರು: ಡಿಸಿಎಂ ಆಗಿದ್ದರೂ ಆ ಸ್ಥಾನದ ಗೌರವ, ಮೌಲ್ಯ ಏನು ಅಂತ ಅವರಿಗೆ ಅರ್ಥ ಅಗಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿಂದು ಸಭೆ ನಡೆಸಿ ಮಾತನಾಡಿದ ಅವರು, ಡಿಸಿಎಂ ಆಗಿದ್ದರೂ ಆ ಸ್ಥಾನದ ಗೌರವ, ಮೌಲ್ಯ ಏನು ಅಂತ ಅವರಿಗೆ ಅರ್ಥ ಅಗಿಲ್ಲ. ಒಟ್ಟಿನಲ್ಲಿ ನಮ್ಮ ಕುಟುಂಬ ಮುಗಿಸಲೇಬೇಕು ಅಂತ ಶ್ರಮಪಡ್ತಿದ್ದಾರೆ.
ಅದರ ಮುಂದುವರಿದ ಭಾಗವಾಗಿ ಯಾಗದ ಮಾತು ಹೇಳ್ತಿದ್ದಾರೆ. ನಮ್ಮ ಕುಟುಂಬದಲ್ಲಿ ನನಗೆ ತಿಳಿವಳಿಕೆ ಬಂದಾಗಿನಿಂದ ಕುರಿ, ಕೋಣ, ಮೇಕೆ ಕಡಿಯೋದು ಯಾವತ್ತೂ ಮಾಡಿಲ್ಲ. ನಾವು ದೇವರ ಪೂಜೆ ಮಾಡ್ತೀವಿ. ಹಿಂದೂ ಸಂಸ್ಕೃತಿಯಲ್ಲಿ ಇರೋ ಧಾರ್ಮಿಕವಾಗಿ ನಾವು ಪೂಜೆ ಮಾಡ್ತೀವಿ. ನಮಗೆ ಇರೋ ದೋಷ ಪರಿಹಾರಕ್ಕೆ ದೇವಾಲಯಕ್ಕೆ ಹೋಗ್ತೀವಿ ಹೊರತು ಯಾಗ ಮಾಡುವುದಿಲ್ಲ. ಯಾಗ ಮಾಡೋದು ಡಿಕೆಶಿ ಸಂಸ್ಕೃತಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಒಟ್ಟಿನಲ್ಲಿ ಡಿಕೆಶಿ ನಮ್ಮ ಕುಟುಂಬ ಮುಗಿಸಲೇಬೇಕು ಅಂತ ಶ್ರಮಪಡ್ತಿದ್ದಾರೆ !
Date: