No menu items!
22.3 C
Munich
Tuesday, May 5, 2026

ಕಟ್ಟಡಗಳು ಶಿಥಿಲಗೊಂಡಿದ್ದರೆ ಪರ್ಯಾಯ ವ್ಯವಸ್ಥೆ ಮಾಡಬೇಕು !

Must read

ಬೆಂಗಳೂರು:- ಮಧು ಬಂಗಾರಪ್ಪ ಅವರು, BBMP ನರ್ಸರಿ ಶಾಲಾ ಕಟ್ಟಡ ಕುಸಿತದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಗುತ್ತಿಗೆದಾರರ ವಿರುದ್ಧ ಕಾನೂನು ಅಡಿಯಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ ಮಧು ಬಂಗಾರಪ್ಪ, ಯಾವ ರೀತಿಯಲ್ಲಿ ಕಟ್ಟಡ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಸಂಪೂರ್ಣ ಮಾಹಿತಿ ತೆಗೆದುಕೊಳ್ಳುತ್ತೇನೆ ಎಂದರು.
ಯಾರಿಗಾದರೂ ಅನಾಹುತವಾದಾಗ ಪರಿಹಾರ ನೀಡುತ್ತೇವೆ, ಇದುವೇ ಪರಿಹಾರ ಅಲ್ಲ. ಇಂತಹ ಸಂದರ್ಭ ಮರುಕಳಿಸದಂತೆ ನೋಡಿ ಕೊಳ್ಳಬೇಕು. ಸಾರ್ವಜನಿಕರ ಯಾವುದೇ ಕಟ್ಟಡವಾಗಲಿ ಜವಾಬ್ದಾರಿ ತೆಗೆದುಕೊಳ್ಳಬೇಕು. ಕಟ್ಟಡಗಳು ಶಿಥಿಲಗೊಂಡಿದ್ದರೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಮಕ್ಕಳ ಸುರಕ್ಷತೆ ಬಗ್ಗೆ ಮೊದಲು ನೋಡಬೇಕು, ನಂತರ ಶಿಕ್ಷಣ ಎಂದರು.

- Advertisement -spot_img

More articles

- Advertisement -spot_img

Latest article