No menu items!
5.2 C
Munich
Friday, April 24, 2026

ಕಟ್ಟಡ ಕುಸಿತ ಪ್ರಕರಣ: ಕಟ್ಟಡ ಮಾಲೀಕ ಸೇರಿ ಹಲವರ ವಿರುದ್ಧ’FIR ದಾಖಲು.!

Must read

ಕಟ್ಟಡ ಕುಸಿತ ಪ್ರಕರಣ: ಕಟ್ಟಡ ಮಾಲೀಕ ಸೇರಿ ಹಲವರ ವಿರುದ್ಧ’FIR ದಾಖಲು.!

ಬೆಂಗಳೂರು:- ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಹಲವು ಜನ ಮೃತಪಟ್ಟಿರುವ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸದಂತೆ ಹೆಣ್ಣೂರು ಠಾಣೆಯಲ್ಲಿ ಕಟ್ಟಡ ಮಾಲೀಕ ಮುನಿರಾಜು ರೆಡ್ಡಿ ಹಾಗೂ ಆತನ ಮಗನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮುನಿರಾಜು ರೆಡ್ಡಿ ಆತನ ಮಗ, ಕಾಂಟ್ರ‍್ಯಾಕ್ಟರ್ ಸೇರಿ ಇತರರು ಎಂದು ಎಫ್‌ಐಆರ್‌ನಲ್ಲಿ (FIR) ಉಲ್ಲೇಖವಾಗಿದೆ. ಪ್ರಕರಣದಲ್ಲಿ ಒಟ್ಟು ಮೂರು ಜನರ ಹೆಸರನ್ನು ಪೊಲೀಸರು ಉಲ್ಲೇಖ ಮಾಡಿದ್ದು, ನಿರ್ಲಕ್ಷ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಳೆಯಿಂದ ಈ ಘಟನೆ ಸಂಭವಿಸಿಲ್ಲ ಇದಕ್ಕೆ ಕಳಪೆ ಕಾಮಗಾರಿಯೇ ಕಾರಣ ಎನ್ನುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಅವಶೇಷಗಳಡಿ ನಿಲುಕಿರುವ ಇನ್ನೂ ಎರಡರಿಂದ ಮೂರು ಜನರಿಗಾಗಿ ಹುಡುಕಾಟ ಮುಂದುವರೆದಿದೆ.

- Advertisement -spot_img

More articles

- Advertisement -spot_img

Latest article