ಕನ್ನಡದಲ್ಲಿ ನಟಿಸಿದ ನಟಿಮಣಿಗೆ ಆಫರ್ ಗಳ ಸುರಿಮಳೆ!

Date:

ವಿಕಟ ಕವಿ ಯೋಗರಾಜ್ ಭಟ್ ನಿರ್ದೇಶದಲ್ಲಿ ಮೂಡಿಬಂದ ಪಂಚತಂತ್ರ ಪ್ರೇಕ್ಷಕರ ಮನ ಗೆದ್ದಿದೆ. ಅದ್ರಲ್ಲೂ ಯೋಗರಾಜ್ ಭಟ್ ಬರೆದಿರುವ ಹಾಡುಗಳಂತೂ ಸ್ಯಾಂಡಲ್ವುಡ್ ಅಂಗಳದಲ್ಲಿ ಸಖತ್ ಸೌಂಡ್ ಮಾಡಿದೆ.
ಇನ್ನು ಪಂಚತಂತ್ರ ಚಿತ್ರರಂಗದಲ್ಲಿ ಕಾಣಿಸಿಕೊಂಡ ನಟ ನಟಿ ಇಬ್ಬರು ಭರವಸೆಯ ನಟರಾಗಿದ್ದಾರೆ. ಹೌದು ನಿರ್ದೇಶಕ ಯೋಗರಾಜ್ ಸಿನಿಮಾದಲ್ಲಿ ಬಣ್ಣ ಹಚ್ಚಿದ ಅನೇಕ ಕಲಾವಿದರು ಇಂದು ದೊಡ್ಡ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. ಈಗ ಈ ಸಾಲಿಗೆ ಮತ್ತೊಬ್ಬ ನಟಿ ಸೋನಲ್ ಮೊಂತೆರೊ ಸೇರ್ಪಡೆಯಾಗಿದ್ದಾರೆ. ಯೋಗರಾಜ್ ಭಟ್ಟರ್ ಸಿನಿಮಾದಲ್ಲಿ ನಟಿಸುವ ಮೂಲಕ ಸಾಲು ಸಾಲು ಆಫರ್ಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ. ತುಳು ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದ ಸೋನಲ್ ನಂತರ ಸ್ಯಾಂಡಲ್ವುಡ್ನಲ್ಲಿ ಒಂದೆರಡು ಚಿತ್ರಗಳಲ್ಲಿ ಸೋನಲ್ ನಟಿಸಿದ್ರೂ ಜನರು ಕೈ ಹಿಡಿದಿದ್ದು ಪಂಚತಂತ್ರದ ಚಿತ್ರದ ಮೂಲಕ. ಈ ಚಿತ್ರದ ನಂತರ ಸೋನಲ್ ಈಗ ಸಾಲು ಸಾಲು ಚಿತ್ರಗಳ ಆಫರ್ ಬರುತ್ತಿದೆಯಂತೆ. ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2, ಮೌರ್ಯ ನಿರ್ದೇಶನದ ಬುದ್ಧಿವಂತ 2 ಚಿತ್ರ ತಂಡದಲ್ಲೂ ಸೋನಲ್ ಸ್ಥಾನ ಪಡೆದುಕೊಂಡಿದ್ದಾರೆ. ತಲ್ವಾರ್ಪೇಟೆ ಚಿತ್ರದಲ್ಲೂ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಈ ನಟಿಮಣಿ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...