ಕನ್ನಡದ ಮೊನಾಲಿಸಾ ಮೇಘನಾರ ಮುಂದಿನ ಚಿತ್ರ ಯಾವ್ದು ಗೊತ್ತಾ?

Date:

ಕನ್ನಡದ ಮೊನಾಲಿಸಾ ಮೇಘನಾ ಗಾವಂಕರ್ ಅವರು ಸದ್ದಿಲ್ಲದೆ ಒಂದೊಂದೇ ಸಿನಿಮಾಗಳ ಕೆಲಸಗಳನ್ನು ಮುಗಿಸುತ್ತಿದ್ದಾರೆ. 2010ರಲ್ಲಿ ತೆರೆಕಂಡ ನಮ್​ ಏರಿಯಾಲಿ ಒಂದ್​ದಿನ ಎನ್ನುವ ಸಿನಿಮಾ ಮೂಲಕ ಸ್ಯಾಂಡಲ್​ವುಡ್​ ಗೆ ಎಂಟ್ರಿ ಕೊಟ್ಟವರು. ನಂತರ 2011ರಲ್ಲಿ ವಿನಾಯಕ ಗೆಳೆಯರ ಬಳಗ ಹಾಗೂ ತುಘಲಕ್ ಎಂಬ ಎರಡು ಸಿನಿಮಾಗಳಲ್ಲಿ ನಟಿಸಿದ್ದರು.
2012ರಲ್ಲಿ ರಿಲೀಸ್ ಆದ ಚಾರ್​ಮಿನಾರ್ ಸಿನಿಮಾ ಸೂಪರ್ ಹಿಟ್ ಆಯಿತು. ಈ ಸಿನಿಮಾದಲ್ಲಿ ಮೇಘನಾ ರಾಧೆಯಾಗಿ ಪಾತ್ರಕ್ಕೆ ನ್ಯಾಯ ಒದಗಿಸಿದ್ರು. 2012ರಲ್ಲಿ ಭಕ್ತ ಶಂಕರ, 2016ರಲ್ಲಿ ಸಿಂಪಲ್​ ಆಗಿ ಇನ್ನೊಂದು ಲವ್ ಸ್ಟೋರಿ ಸಿನಿಮಾಗಳಲ್ಲಿ ಅಭಿನಯಿಸಿದ್ರು.

ಇದೀಗ ಕಾಳಿದಾಸ ಕನ್ನಡ ಮೇಷ್ಟ್ರು ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಸದ್ದಿಲ್ಲದೆ ಈ ಸಿನಿಮಾದ ಶೂಟಿಂಗ್ ಮುಗಿಸಿರುವ ಮೇಘನಾ ಗಾವಂಕರ್ ಅವರು ಹೊಸ ಸಿನಿಮಾಕ್ಕೆ ಸಹಿ ಮಾಡಿದ್ದಾರೆ. ಆ ಸಿನಿಮಾದ ಹೆಸರಿನ್ನೂ ಫೈನಲ್ ಆಗಿಲ್ಲ. ಸಂತೋಷ್​ ಜಿ ಎನ್ನುವ ಹೊಸ ನಿರ್ದೇಶಕರಿಗೆ ಮೇಘನಾ ಕಾಲ್ ಶೀಟ್ ಕೊಟ್ಟಿದ್ದಾರೆ.
ಸಂತೋಷ್​ ಜಿ ಆ ಹೊಸ ಡೈರೆಕ್ಟರ್ ಸಿನಿಮಾ ಮಾಡ್ತಿದ್ದಾರೆ. ಅವರು ಅನೇಕ ಕಿರುಚಿತ್ರಗಳನ್ನು ಮಾಡಿದ್ದಾರೆ. ಅವರ ಚೊಚ್ಚಲ ಸಿನಿಮಾಕ್ಕೆ ಮೇಘನಾ ಗಾವಂಕರ್ ನಾಯಕಿ. ಈ ಸಿನಿಮಾ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ಆಗಿದೆ ಎಂದು ತಿಳಿದುಬಂದಿದೆ, ಜೂದಾ ಸ್ಯಾಂಡಿ ಸಂಗೀತ6 ನೀಡಿದ್ದಾರೆ. ರಾಕೇಶ್ ಸಿನಿಮಾಟೋಗ್ರಪಿ ಹೊಣೆ ಹೊತ್ತಿದ್ದಾರೆ. ಆದರೆ, ಸಿನಿಮಾಕ್ಕಿನ್ನೂ ಹೆಸರಿಟ್ಟಿಲ್ಲ ಶೀಘ್ರದಲ್ಲೇ ಸಿನಿಮಾ ಹೆಸರು ಘೋಷಣೆಯಾಗಿ ಸೆಟ್ಟೇರಲಿದೆ.

Share post:

Subscribe

spot_imgspot_img

Popular

More like this
Related

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು?

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು? ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಮತ್ತು ಶಕ್ತಿಯುತವಾಗಿರಿಸಲು...