ಕನ್ನಡಿಗರ ಕ್ಷಮೆಯಾಚಿಸಿದ ಗೂಗಲ್ – ವಿವಾದ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ

Date:

ಭಾರತದ ಅತ್ಯಂತ ಕುರೂಪಿ ಭಾಷೆ’ ಎಂದು ಗೂಗಲ್‌ನಲ್ಲಿ ಟೈಪಿಸಿ ಸರ್ಚ್ ಮಾಡಿದರೆ ಮೊದಲು ಎದುರಾಗುವುದು ‘ಕನ್ನಡ’. ಕನ್ನಡಿಗರ ಸ್ವಾಭಿಮಾನ, ಭಾಷೆ, ನೆಲ, ಜಲದ ಕುರಿತಂತೆ ಪದೇ ಪದೇ ಕೆಣಕುವ ಪ್ರಯತ್ನಗಳು ನಡೆಯುತ್ತಲೇ ಇದೆ. ಅದಕ್ಕೆ ಇನ್ನೊಂದು ಸೇರ್ಪಡೆ ಇದು. ಕಳೆದ ಕೆಲವು ದಿನಗಳಿಂದ ಈ ಬಗ್ಗೆ ಕನ್ನಡ ಪ್ರೇಮಿಗಳು ಚರ್ಚೆ ನಡೆಸುತ್ತಿದ್ದರು.


Ugliest Language In India (ಭಾರತದ ಅತ್ಯಂತ ಕುರೂಪಿ ಭಾಷೆ) ಎಂದು ಟೈಪ್ ಮಾಡಿದರೆ ಗೂಗಲ್ ಮೊದಲು ಪ್ರದರ್ಶಿಸುವುದು debtconsolidationsquad.com ಎಂಬ ಜಾಲತಾಣವೊಂದರಲ್ಲಿ ಪ್ರಕಟವಾದ ಅಂಶವನ್ನು. ದಕ್ಷಿಣ ಭಾರತದಲ್ಲಿ ಸುಮಾರು 40 ಮಿಲಿಯನ್ ಜನರು ಆಡುವ ಭಾಷೆ ಕನ್ನಡ. ಕನ್ನಡ ಅತ್ಯಂತ ಕನಿಷ್ಠವಾಗಿ ಪರಿಗಣಿಸಬಹುದಾದ ಭಾಷೆ. ಈ ಭಾಷೆ ಮಾತನಾಡುವ ಜನರು ಇತರರೊಂದಿಗೆ ಗೊಂದಲಕ್ಕೆ ಒಳಗಾಗುವ ಸಾಧ್ಯತೆಯೇ ಹೆಚ್ಚು ಎಂದೆಲ್ಲ ಇದರಲ್ಲಿ ಬರೆಯಲಾಗಿದೆ.
ಆದರೆ ಈ ವೆಬ್‌ಸೈಟ್‌ನಲ್ಲಿ ಕನ್ನಡ ಭಾಷೆಯ ಬಗ್ಗೆ ಬರೆದಿರುವ ಪೂರ್ಣ ಪಠ್ಯ ಲಭ್ಯವಾಗಿಲ್ಲ. ಇದರಲ್ಲಿ ಏನೇನು ಬರೆಯಲಾಗಿದೆ ಎಂಬ ವಿಚಾರವನ್ನು ಹುಡುಕಲು ಪ್ರಯತ್ನಿಸಿದರೂ ಆ ಕೊಂಡಿ ತೆರೆಯುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಅನೇಕರು ಹೇಳಿಕೊಂಡಿದ್ದಾರೆ.

ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ ಮೊದಲಿಗೆ ಕಾಣಿಸುವ ಈ ವೆಬ್‌ಸೈಟ್ ದ್ವೇಷ ಹಾಗೂ ತಪ್ಪು ಮಾಹಿತಿಯನ್ನು ಹರಡುತ್ತಿದೆ ಎಂದು ಅನೇಕರು ಗೂಗಲ್‌ಗೆ ಆಕ್ಷೇಪಣೆ ಸಲ್ಲಿಸಿದ್ದಾರೆ. ಸತತ ಪ್ರಯತ್ನದ ಬಳಿಕ ಈ ಮಾಹಿತಿಯನ್ನು ಈಗ ಗೂಗಲ್‌ನಿಂದ ಅಳಿಸಿ ಹಾಕಲಾಗಿದೆ. ಆದರೆ ಗೂಗಲ್‌ನ ಕೆಲವು ಕೊಂಡಿಗಳಲ್ಲಿ ಇದು ಈಗಲೂ ಲಭ್ಯವಿದೆ. ಈ ವಿಚಾರವನ್ನು ಬರೆದವರು ಯಾರು, ಯಾವ ಮಾನದಂಡದಡಿ ಅತ್ಯಂತ ಕುರೂಪಿ ಎಂಬ ಹಣೆಪಟ್ಟಿ ನೀಡಲಾಗಿದೆ, ಇಂತಹ ಆಧಾರರಹಿತ ಲೇಖನಗಳಿಗೆ ಗೂಗಲ್ ಹೇಗೆ ಅನುಮೋದನೆ ನೀಡುತ್ತದೆ ಎಂಬ ಬಗ್ಗೆ ಕೂಡ ಚರ್ಚೆಗಳಾಗುತ್ತಿವೆ.

ಬೇಸರದ ಸಂಗತಿ ನಡುವೆಯೇ, ಖುಷಿ ಸುದ್ದಿಯೊಂದನ್ನೂ ನೆಟ್ಟಿಗರು ಗೂಗಲ್‌ನಲ್ಲಿ ಕಂಡುಕೊಂಡಿದ್ದಾರೆ. ‘ಎಲ್ಲ ಭಾಷೆಗಳ ರಾಣಿ’ ಎಂದು ಗೂಗಲ್‌ನಲ್ಲಿ ಟೈಪ್ ಮಾಡಿದರೆ ‘ಕನ್ನಡ’ ಎಂಬ ಹೆಸರು ಮೂಡುತ್ತದೆ. ಸಂವಿಕ್ಷಣ.ವೀಬ್ಲಿ ಡಾಟ್ ಕಾಂ ಎಂಬ ವೆಬ್‌ಸೈಟ್‌ನಲ್ಲಿ ‘ವಿಶ್ವದ ಲಿಪಿಗಳ ರಾಣಿ’ ಎಂದು ಕನ್ನಡವನ್ನು ಗುರುತಿಸಲಾಗಿದೆ. ಭೂದಾನ ಚಳಿವಳಿಯ ಹರಿಕಾರ ಎಂದೇ ಖ್ಯಾತರಾಗಿರುವ ಮಹಾರಾಷ್ಟ್ರ ಮೂಲದ ಸ್ವಾತಂತ್ರ್ಯ ಹೋರಾಟಗಾರ ವಿನೋದಾ ಭಾವೆ ಅವರು ‘ಕನ್ನಡ ಭಾಷೆ ಲಿಪಿಗಳ ರಾಣಿ’ ಎಂದು ಕರೆದಿದ್ದರು.

ಈ ಎಲ್ಲದರ ನಡುವೆ ಕನ್ನಡಿಗರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂಬುದು ಗಮನಕ್ಕೆ ಬರುತ್ತಿದ್ದಂತೆ ಗೂಗಲ್ ಟ್ವೀಟ್ ಮೂಲಕ‌ ಕ್ಷಮೆಯಾಚಿಸಿದೆ.

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...