ಕನ್ನಡ ಆಯ್ತು ಇದೀಗ ತೆಲುಗು ಚಿತ್ರಗಳಲ್ಲಿಯೂ ನಟಿಸುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

Date:

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದ ನಟಿ ರಶ್ಮಿಕಾ ಮಂದಣ್ಣ ಇದೀಗ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರು. ಕಿರಿಕ್ ಪಾರ್ಟಿ ಸಿನಿಮಾದಿಂದಾಗಿ ರಶ್ಮಿಕಾ ಮಂದಣ್ಣ ಅವರು ಒಳ್ಳೆಯ ಹೆಸರಿನ ಜೊತೆ ದೊಡ್ಡ ದೊಡ್ಡ ಚಿತ್ರಗಳ ಆಫರ್ ಗಳನ್ನು ಸಹ ಪಡೆದುಕೊಂಡರು. ಪುನೀತ್, ದರ್ಶನ್ ರಂತಹ ಸ್ಟಾರ್ ನಟರ ಜೊತೆ ನಟಿಸಿದ ನಂತರ ತೆಲುಗಿಗೆ ಹಾರಿದ ನಟಿ ರಶ್ಮಿಕಾ ಮಂದಣ್ಣ ಇದೀಗ ತಮಿಳು ಚಿತ್ರದಲ್ಲೂ ಅಭಿನಯಿಸುತ್ತಿದ್ದಾರೆ.

 

 

ತೆಲುಗಿನಲ್ಲಿಯೂ ಸಹ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡಿದ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಇದೀಗ ಬಾಲಿವುಡ್ ಆಫರ್ಗಳು ಬರತೊಡಗಿವೆ. ಹೌದು ರಶ್ಮಿಕಾಗೆ ಬಾಲಿವುಡ್ ಆಫರ್ ಬರುತ್ತಿರುವ ಕಾರಣದಿಂದ ಅಲ್ಲಿಯ ಬಿಗ್ ಬಜೆಟ್ ಚಿತ್ರದಲ್ಲಿ ಅಭಿನಯಿಸಲು ತೆಲುಗಿನ ಸ್ಟಾರ್ ನಟನ ಚಿತ್ರವೊಂದನ್ನು ತಿರಸ್ಕರಿಸಿದ್ದಾರೆ ಎಂಬ ಸುದ್ದಿ ಇದೀಗ ಹರಿದಾಡುತ್ತಿದೆ.

 

ಹೌದು ಜೂನಿಯರ್ ಎನ್ಟಿಆರ್ ಚಿತ್ರದಲ್ಲಿ ರಶ್ಮಿಕಾ ನಟಿಸಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ ಹಿಂದಿ ಚಿತ್ರದಲ್ಲಿ ಅಭಿನಯಿಸುವ ಸಲುವಾಗಿ ಈ ಅವಕಾಶವನ್ನು ರಶ್ಮಿಕಾ ಮಂದಣ್ಣ ಅವರು ತಿರಸ್ಕಾರ ಮಾಡಿದ್ದಾರೆ ಎಂಬ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಇನ್ನು ಈ ಹಿಂದೆ ರಶ್ಮಿಕಾ ಮಂದಣ್ಣ ಅವರು ತೆಲುಗಿಗೆ ಹೋದಾಗ ಕನ್ನಡದ “ವೃತ್ರ” ಎಂಬ ಸಿನಿಮಾವನ್ನು ಒಪ್ಪಿಕೊಂಡು ತದನಂತರ ತಿರಸ್ಕರಿಸಿದ್ದರು. ಇದೀಗ ತೆಲುಗಿನಲ್ಲಿಯೂ ಸಹ ಅದೇ ರೀತಿ ಮಾಡುತ್ತಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿವೆ..

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...