ಕನ್ನಡ ಮರೆತ ವೆಂಕಟೇಶ್ ಪ್ರಸಾದ್; ಹಿಂದಿ ಮೇಲೇಕೆ ಪ್ರೀತಿ?

Date:

ದೇಶದಾದ್ಯಂತ ದೀಪಾವಳಿಯ ಆಚರಣೆ ಜೋರಾಗಿದೆ. ಪುನೀತ್ ರಾಜ್ ಕುಮಾರ್ ನಿಧನದ ನೋವಿನಲ್ಲಿಯೇ ಕನ್ನಡಿಗರು ಬೆಳಕಿನ ಹಬ್ಬ ದೀಪಾವಳಿಯನ್ನು ಹೆಚ್ಚೇನೂ ಸಡಗರ ಇಲ್ಲದೆ ಆಚರಿಸುತ್ತಿದ್ದಾರೆ. ಇದರ ನಡುವೆಯೂ ಹಲವಾರು ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಕ್ರಿಕೆಟಿಗರು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ದೀಪಾವಳಿ ಹಬ್ಬದ ಶುಭಾಶಯವನ್ನು ಕೋರಿ, ಜಾಗ್ರತೆಯಿಂದ ಆಚರಿಸಿ ಎಂಬ ಸಂದೇಶವನ್ನು ನೀಡುತ್ತಿದ್ದಾರೆ.

ಇದರ ನಡುವೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಸಂಪೂರ್ಣ ಹಿಂದಿ ಭಾಷೆಯಲ್ಲಿ ದೀಪಾವಳಿಯ ಶುಭಾಶಯಗಳನ್ನು ಕೋರುವುದರ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೂಲತಃ ಕರ್ನಾಟಕದವರಾದ ವೆಂಕಟೇಶ್ ಪ್ರಸಾದ್ ಓರ್ವ ಕನ್ನಡಿಗನಾಗಿ ಸಾಮಾಜಿಕ ಜಾಲತಾಣದಲ್ಲಿ ಕನ್ನಡವನ್ನು ಕಡೆಗಣಿಸಿ ಹಿಂದಿಯಲ್ಲಿ ದೀಪಾವಳಿಯ ಶುಭಾಶಯಗಳನ್ನು ಕೋರುವ ಅಗತ್ಯವಾದರೂ ಏನಿತ್ತು ಎಂಬ ಪ್ರಶ್ನೆ ಇದೀಗ ಎಲ್ಲೆಡೆ ಮೂಡುತ್ತಿದೆ.

Share post:

Subscribe

spot_imgspot_img

Popular

More like this
Related

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...