ಬೆಂಗಳೂರು: ‘ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ’ ಎಂಬ ಅಭಿಯಾನಕ್ಕೆ ಕನ್ನಡಿಗರು ಕರೆ ಕೊಟ್ಟಿದ್ದು, ಸದ್ಯ ಟ್ವಿಟ್ಟರ್ನಲ್ಲಿ ಟ್ರೆಂಡಿಂಗ್ ಆಗಿದೆ.
ಕರ್ನಾಟದಲ್ಲಿ ಉದ್ಯೋಗ ಬೇರೆ ರಾಜ್ಯದವರ ಪಾಲಾಗುತ್ತಿದೆ, ಕರ್ನಾಟಕದಲ್ಲೇ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಟ್ವೀಟ್ ಮಾಡುವ ಮೂಲಕ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟದಲ್ಲಿ ಉದ್ಯೋಗ ಬೇರೆ ರಾಜ್ಯದವರ ಪಾಲಾಗುತ್ತಿದೆ, ಕರ್ನಾಟಕದಲ್ಲೇ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಟ್ವೀಟ್ ಮಾಡುವ ಮೂಲಕ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
#karnatakaJobsForkannadigas ಎಂಬ ಹ್ಯಾಶ್ ಟ್ಯಾಗ್ನೊಂದಿಗೆ ಅಭಿಯಾನ ನಡೆಯುತ್ತಿದೆ. ಟ್ವಿಟರ್ ನಲ್ಲಿ ಸಖತ್ ಟ್ರೆಂಡಿಂಗ್ ಆಗುತ್ತಿದೆ. ಸಾಕಷ್ಟು ಜನ ಕನ್ನಡಿಗರು ಅಭಿಯಾನದಲ್ಲಿ ಭಾಗಿಯಾಗುವ ಮೂಲಕ ಕನ್ನಡಿಗರಿಗೆ ಕರ್ನಾಟಕದಲ್ಲಿ ಉದ್ಯೋಗ ನೀಡಿ ಹಾಗೂ ಕನ್ನಡಿಗರಿಗೆ ಉದ್ಯೋಗ ನೀಡುವ ಕುರಿತಾಗಿ ಸರೋಜಿನಿ ಮಹಿಷಿ ವರದಿ ಜಾರಿಗೆ ಮಾಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.