ಕರ್ನಾಟಕಕ್ಕೂ ಬರಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು

Date:

ನೈಋತ್ಯ ರೈಲ್ವೆ ಕರ್ನಾಟಕದಲ್ಲಿ ‘ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು’ ಓಡಿಸಲು ತಯಾರಿ ನಡೆಸಿದೆ. ದೇಶದ ಅತಿ ವೇಗದ ರೈಲು ‘ವಂದೇ ಭಾರತ್ ಎಕ್ಸ್‌ಪ್ರೆಸ್‌’ ಆಗಿದೆ. ಈಗಾಗಲೇ ದೇಶದಲ್ಲಿ ಈ ರೈಲುಗಳು ಸಂಚಾರ ನಡೆಸುತ್ತಿವೆ.

ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಸಂಜೀವ ಕಿಶೋರ್ ಈ ಕುರಿತು ಮಾತನಾಡಿದರು, “ಶೀಘ್ರದಲ್ಲೇ ಹುಬ್ಬಳ್ಳಿ-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಓಡಿಸಲಾಗುತ್ತದೆ” ಎಂದು ಹೇಳಿದರು. “ಎರಡು ನಗರಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆರಂಭಿಸಿದೆ ಸಂಚಾರದ ಅವಧಿ ಕಡಿಮೆಯಾಗಲಿದೆ. ಪ್ರಸ್ತುತ 7 ಗಂಟೆ ಇರುವ ಪ್ರಯಾಣದ ಅವಧಿ 5 ಗಂಟೆ 30 ನಿಮಿಷಕ್ಕೆ ಇಳಿಕೆಯಾಗಲಿದೆ” ಎಂದು ತಿಳಿಸಿದರು.

ಕೇಂದ್ರ ಸಚಿವರಿಗೆ ಮನವಿ; ಧಾರವಾಡದ ಬಿಜೆಪಿ ಸಂಸದ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಭೇಟಿ ಮಾಡಿ ಬೆಂಗಳೂರು-ಧಾರವಾಡ ನಡುವೆ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲು ಓಡಿಸುವ ಕುರಿತು ಮನವಿಯನ್ನು ಸಲ್ಲಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...