ಕರ್ನಾಟಕಕ್ಕೂ ಬರಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು

Date:

ನೈಋತ್ಯ ರೈಲ್ವೆ ಕರ್ನಾಟಕದಲ್ಲಿ ‘ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು’ ಓಡಿಸಲು ತಯಾರಿ ನಡೆಸಿದೆ. ದೇಶದ ಅತಿ ವೇಗದ ರೈಲು ‘ವಂದೇ ಭಾರತ್ ಎಕ್ಸ್‌ಪ್ರೆಸ್‌’ ಆಗಿದೆ. ಈಗಾಗಲೇ ದೇಶದಲ್ಲಿ ಈ ರೈಲುಗಳು ಸಂಚಾರ ನಡೆಸುತ್ತಿವೆ.

ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಸಂಜೀವ ಕಿಶೋರ್ ಈ ಕುರಿತು ಮಾತನಾಡಿದರು, “ಶೀಘ್ರದಲ್ಲೇ ಹುಬ್ಬಳ್ಳಿ-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಓಡಿಸಲಾಗುತ್ತದೆ” ಎಂದು ಹೇಳಿದರು. “ಎರಡು ನಗರಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆರಂಭಿಸಿದೆ ಸಂಚಾರದ ಅವಧಿ ಕಡಿಮೆಯಾಗಲಿದೆ. ಪ್ರಸ್ತುತ 7 ಗಂಟೆ ಇರುವ ಪ್ರಯಾಣದ ಅವಧಿ 5 ಗಂಟೆ 30 ನಿಮಿಷಕ್ಕೆ ಇಳಿಕೆಯಾಗಲಿದೆ” ಎಂದು ತಿಳಿಸಿದರು.

ಕೇಂದ್ರ ಸಚಿವರಿಗೆ ಮನವಿ; ಧಾರವಾಡದ ಬಿಜೆಪಿ ಸಂಸದ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಭೇಟಿ ಮಾಡಿ ಬೆಂಗಳೂರು-ಧಾರವಾಡ ನಡುವೆ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲು ಓಡಿಸುವ ಕುರಿತು ಮನವಿಯನ್ನು ಸಲ್ಲಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...