ಕರ್ನಾಟಕದ ‘ಸಿಂಗಂ’ ಖ್ಯಾತಿಯ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆ.?! ಕಾರಣ ಗೊತ್ತಾ?

Date:

ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯ ಪ್ರವೇಶಿಸಲು ಚಿಂತನೆ ನಡೆಸಿದ್ದಾರೆಂದು ಹೇಳಲಾಗಿದೆ.

ಪ್ರಸ್ತುತ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಅಣ್ಣಾಮಲೈ ಅವರು, ಸದ್ಯದಲ್ಲೇ ಗೃಹ ಇಲಾಖೆ ಕಾರ್ಯದರ್ಶಿಯವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

ಚಿಕ್ಕಮಗಳೂರು ಜಿಲ್ಲಾ ರಕ್ಷಣಾಧಿಕಾರಿಗಳಾಗಿದ್ದ ಅಣ್ಣಾಮಲೈ ಅವರು, ಕಾನೂನು-ಸುವ್ಯವಸ್ಥೆ ಕಾಪಾಡಲು ಹಲವು ಖಡಕ್ ನಿರ್ಧಾರಗಳನ್ನು ಕೈಗೊಂಡು ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಬಳಿಕ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದ್ದು, ಅಲ್ಲೂ ಕೂಡ ಕಾನೂನುಬಾಹಿರ ಚಟುವಟಿಕೆ ನಡೆಸುವವರಿಗೆ ಅಣ್ಣಾಮಲೈ ಸಿಂಹಸ್ವಪ್ನರಾಗಿದ್ದರು.

ಆದರೆ ಇತ್ತೀಚಿನ ಕೆಲ ಬೆಳವಣಿಗೆಗಳಿಂದ ಅಣ್ಣಾಮಲೈ ಬೇಸರಗೊಂಡಿದ್ದಾರೆಂದು ಹೇಳಲಾಗಿದೆ.ಹೀಗಾಗಿಯೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಅವರು ನಿರ್ಧರಿಸಿದ್ದು, ಮುಂದಿನ ದಿನಗಳಲ್ಲಿ ತಮಿಳುನಾಡು ರಾಜಕಾರಣದಲ್ಲಿ ಗುರುತಿಸಿಕೊಳ್ಳುವ ಸಾಧ್ಯತೆಯಿದೆಯೆಂದು ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...