No menu items!
23.4 C
Munich
Saturday, May 2, 2026

ಕಲಬುರಗಿಯಲ್ಲಿ ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಸರ್ಕಾರಿ ಅಧಿಕಾರಿಗಳು!

Must read

ಕಲಬುರಗಿಯಲ್ಲಿ ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಸರ್ಕಾರಿ ಅಧಿಕಾರಿಗಳು!

ಕಲಬುರ್ಗಿ:- ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸುತ್ತಿದ್ದ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ.

ದಲಿತ ಸೇನೆಯ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ ರೆಡ್ಡಿ, ಮಂಜು ಭಂಡಾರಿ ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ

ಆರೋಪಿಗಳು ಸಮಾಜಿಕ ಜಾಲತಾಣದ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡಿದ್ದಾರೆ. ನಂತರ, ಅವರ ಆರ್ಥಿಕ ಪರಿಸ್ಥ ಆರ್ಥಿಕ ಪರಸ್ಥಿತಿ ನೋಡಿಕೊಂಡು ಅವರಿಗೆ ಹಣದ ಆಮಿಷ ತೋರಿಸಿದ್ದಾರೆ. ಬಳಿಕ, ಯುವತಿಯರನ್ನು ಹನಿಟ್ರ್ಯಾಪ್​ಗೆ ಬಳಸಿಕೊಂಡಿದ್ದಾರೆ. ಆರೋಪಿಗಳು 10ಕ್ಕೂ ಹೆಚ್ಚು ಯುವತಿಯರನ್ನು ಹನಿಟ್ರ್ಯಾಪ್​ಗೆ ಬಳಸಿಕೊಂಡಿದ್ದಾರೆ.

ನಂತರ, ದೊಡ್ಡ ದೊಡ್ಡ ಉದ್ಯಮಿ, ಅಧಿಕಾರಿಗಳನ್ನು ಟಾರ್ಗೆಟ್​​ ಮಾಡುತ್ತಿದ್ದರು. ತಾವು ಟಾರ್ಗೆಟ್​ ಮಾಡಿದವರ ಜೊತೆ ಪಲ್ಲಂಗ ಹಂಚಿಕೊಳ್ಳುವಂತೆ ಹೇಳುತ್ತಿದ್ದರು. ಅಧಿಕಾರಿಗಳು ಅಥವಾ ಉದ್ಯಮಿಗಳು ಯುವತಿಯರೊಂದಿಗೆ ಕಳೆದ ಖಾಸಗಿ ಕ್ಷಣಗಳನ್ನು ಫೋಟೋ ತೆಗೆದುಕೊಂಡು, ವಿಡಿಯೋ ರೆಕಾರ್ಡ್​​ ಮಾಡಿಕೊಂಡು, ಹಣಕ್ಕೆ ಬೇಡಿಕೆ ಇಡುತ್ತಾರೆ. ಇದೀಗ ದೂರು ಆಧರಿಸಿ FIR ದಾಖಲಿಸಲಾಗಿದೆ.

- Advertisement -spot_img

More articles

- Advertisement -spot_img

Latest article