ಕಳೆದ ವರ್ಷ ಕಷ್ಟದಲ್ಲಿ ಇದ್ದೆವು. ಆದರೂ ರೈತರನ್ನು ಕಾಪಾಡಿದ್ದೇವೆ !

Date:

ಮಂಡ್ಯ: ವರುಣನ ಕೃಪೆ, ಚಾಮುಂಡೇಶ್ವರಿ ಅನುಗ್ರಹದಿಂದ ಕಾವೇರಿಗೆ ಬಾಗಿನ ಅರ್ಪಿಸುವ ಕಾಲ ದೊರೆತಿದೆ. ಕಳೆದ ವರ್ಷ ಕಷ್ಟದಲ್ಲಿ ಇದ್ದೆವು. ಆದರೂ ರೈತರನ್ನು ಕಾಪಾಡಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ವರುಣನ ಕೃಪೆ, ಚಾಮುಂಡೇಶ್ವರಿ ಅನುಗ್ರಹದಿಂದ ಕಾವೇರಿಗೆ ಬಾಗಿನ ಅರ್ಪಿಸುವ ಕಾಲ ದೊರೆತಿದೆ. ಕಳೆದ ವರ್ಷ ಕಷ್ಟದಲ್ಲಿ ಇದ್ದೆವು. ಆದರೂ ರೈತರನ್ನು ಕಾಪಾಡಿದ್ದೇವೆ. ಕಳೆದ ವರ್ಷ 200 ತಾಲೂಕುಗಳಲ್ಲಿ ಬರಗಾಲವಿತ್ತು.
ಕಾವೇರಿ ಪ್ರಾಧಿಕಾರ ಆದೇಶದ ಪ್ರಕಾರ 40 ಟಿಎಂಸಿ ಬಿಡಬೇಕಿತ್ತು. ಆದರೆ 20 ಟಿಎಂಸಿ ಬಿಡಲು ಹೇಳಿತ್ತು. ಅಷ್ಟನ್ನೂ ನಾವು ಬಿಡಲಿಲ್ಲ. ಕೆಲವರು ನೀರು ಬಿಟ್ಟಿದ್ದೇವೆ ಎಂದು ವಾದ ಮಾಡಿದ್ದಾರೆ. ನಾವು ಎಲ್ಲರನ್ನು ಕರೆದು ಚರ್ಚೆ ಮಾಡಿದ್ದೇವೆ. ಆನಂತರ ನೀರು ಬಿಟ್ಟಿದ್ದೇವೆ. 30 ಟಿಎಂಸಿ ನೀರು ತಮಿಳುನಾಡಿಗೆ ತಲುಪಿಸಿದ್ದೇವೆ. ಇನ್ನು ಹತ್ತು ಟಿಎಂಸಿ ನೀರು ಬಿಡಬೇಕು. ಈ ವರ್ಷದ ಕೋಟಾ ಮುಗಿಯುತ್ತದೆ. 50 ಸಾವಿರ ಕ್ಯೂಸೆಕ್ ನೀರು ಹೋಗುತ್ತಿದೆ. ಆದೇಶವನ್ನು ಪಾಲನೆ ಮಾಡಿದ್ದೇವೆ ಎಂದು ಅವರು ಹೇಳಿದರು.

Share post:

Subscribe

spot_imgspot_img

Popular

More like this
Related

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ ಬೊಮ್ಮಾಯಿ

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ...

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50% ಮುಚ್ಚುವ ಭೀತಿ

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50%...

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು ಮಾತನಾಡಲಿ – ಡಿಕೆ ಶಿವಕುಮಾರ್

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು...

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು:...