ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವುದು ಪಕ್ಷದ ಗುರಿಯಾಗಿದೆ: ಡಿಕೆ ಶಿವಕುಮಾರ್

0
25

ಬೆಂಗಳೂರು: ಯಾರೂ ರಾಜೀನಾಮೆ ನೀಡಲ್ಲ, ಅಸಲಿಗೆ ಅಭ್ಯರ್ಥಿಯ ಘೋಷಣೆ ಇನ್ನೂ ಆಗಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಯಾರೂ ರಾಜೀನಾಮೆ ನೀಡಲ್ಲ, ಅಸಲಿಗೆ ಅಭ್ಯರ್ಥಿಯ ಘೋಷಣೆ ಇನ್ನೂ ಆಗಬೇಕಿದೆ, ಕೋಲಾರ ಭಾಗದ ಶಾಸಕರ ಒಂದು ಆಗ್ರಹವಿದೆ ಮತ್ತು ಅದನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬೇರೆ ನಾಯಕರ ಜೊತೆ ಚರ್ಚಿಸುವುದಾಗಿ ಹೇಳಿದರು. ಎಲ್ಲರೂ ಒಗ್ಗಟ್ಟಿನಿಂದಿದ್ದಾರೆ, ಎಲ್ಲ ಶಾಸಕರು ಮತ್ತು ಕಾರ್ಯಕರ್ತರು ಒಂದುಗೂಡಿ ಕೆಲಸ ಮಾಡಲಿದ್ದಾರೆ, ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವುದು ಪಕ್ಷದ ಗುರಿಯಾಗಿದೆ ಎಂದು ಹೇಳಿದರು.