ಲೋಕಸಭಾ ಚುನಾವಣೆ ಹತ್ತಿರದಲ್ಲಿದಂತೆ ರಾಜ್ಯ ರಾಜಕೀಯದಲ್ಲಿ ಚಲನವಲನಗಳು ಜೊರಗಿದೆ, ಮೈತ್ರಿ ಸರ್ಕಾರದಲ್ಲಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಕ್ಷೇತ್ರಗಳನ್ನು ಹಂಚಿಕೋಳ್ಳುತಿವೆ ಎನ್ನುವ ಮಾತು ಕೇಳಿಬರುತ್ತಿದೆ .
ಜೆಡಿಎಸ್ ಹನ್ನೆರಡು ಕ್ಷೇತ್ರಗಳ ಆಕಾಂಕ್ಷಿ ಯಲ್ಲಿದ್ದರೂ ಕಾಂಗ್ರೆಸ್ ಸರ್ಕಾರ ಎಂಟು ಕ್ಷೇತ್ರಗಳನ್ನು ಬಿಟ್ಟುಕೊಡುವುದಾಗಿ ಒಪ್ಪಿಕೊಂಡಿದೆ ಎನ್ನುವ ಮಾತು ಕೇಳಿಬರುತ್ತಿದೆ .
ಎರಡು ದಿನಗಳ ಹಿಂದೆ ದೆಹಲಿಗೆ ತೆರಳಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ್ದ ದೇವೇಗೌಡರು 8 ಕ್ಷೇತ್ರಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ,
ಜೆಡಿಎಸ್ ಪ್ರಭಾವ ಹೆಚ್ಚಿರುವ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಿರುವ ಮಂಡ್ಯ,ಹಾಗು ಹಾಸನ, ಶಿವಮೊಗ್ಗ, ತುಮಕೂರು, ಉಡುಪಿ-ಚಿಕ್ಕಮಗಳೂರು, ಬೆಂಗಳೂರು ಉತ್ತರ, ವಿಜಯಪುರ, ಮೈಸೂರು ಕ್ಷೇತ್ರಗಳನ್ನು ಕಾಂಗ್ರೆಸ್, ಜೆಡಿಎಸ್ ಗೆಬಿಟ್ಟುಕೊಟ್ಟಿದೆ ಎನ್ನಲಾಗಿದೆ.
ಇದೆ ಸಮಯದಲ್ಲಿ ಜೆಡಿಎಸ್ ನ ರೇವಣ್ಣ ಅವರು ವಿವಾದಾತ್ಮಕ ಹೇಳಿಕೆ ಮೂಲಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ, ಸುಮಲತಾ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ರೇವಣ್ಣ ಅವರು ನಾನು ಹೇಳಿದ ಮಾತಲ್ಲಿ ಯಾವುದೇ ತಪ್ಪಿಲ್ಲ ಕ್ಷಮೆ ಕೇಳುವ ಮಾತೇ ಇಲ್ಲ ಎಂದು ಹೇಳಿದ್ದಾರೆ , ರಾಜಕೀಯದಲ್ಲಿ ಕುಟುಂಬ ರಾಜಕಾರಣ ಹೊಸದೇನಲ್ಲ ಎಂದು ರೇವಣ್ಣ ಅವರು ಸುದ್ದಿಗಾರರ ಬಳಿ ಹೇಳಿದ್ದಾರೆ