No menu items!
25.8 C
Munich
Sunday, July 26, 2026

ಕಾಂಗ್ರೆಸ್ ದೇಶದ ಭದ್ರತೆಗೆ ಒಂದು ರೀತಿಯ ಅಪಾಯ: ಆರ್. ಅಶೋಕ್

Must read

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ ಆರೋಪಿಗಳು ಕಾಂಗ್ರೆಸ್ ಸಿಸ್ಟರ್ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಸಿಕ್ಕಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದರು. ಇಂತಹ ಕೃತ್ಯ ಎಸಗಿದ ಆರೋಪಿಗಳು ಏಕೆ ಕಾಂಗ್ರೆಸ್ ಅಥವಾ ಅವರ ಸ್ನೇಹಿತರು ಅಧಿಕಾರದಲ್ಲಿರುವ ರಾಜ್ಯವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ದೇಶದ ಭದ್ರತೆಗೆ ಒಂದು ರೀತಿಯ ಅಪಾಯ. ರಾಮೇಶ್ವರಂ ಘಟನೆ ರಾಜ್ಯವನ್ನು ತಲ್ಲಣಗೊಳಿದೆ. ಕಾಂಗ್ರೆಸ್ ಅವಧಿಯಲ್ಲಿ ಪದೇ ಪದೇ ಇಂತಹ ಘಟನೆ ನಡೆಯುತ್ತಿದೆ. ಎನ್ ಐ ಎ ಇವರನ್ನು ಬಂಧಿಸುವ ಮೂಲಕ ಭವಿಷ್ಯದ ಅಪಾಯ ತಪ್ಪಿಸಿದೆ ಎಂದರು.
ರಾಮೇಶ್ವರಂ ಕೆಫೆ ಸ್ಫೋಟದ ಆರೋಪಿಗಳ ಬಂಧನದಿಂದ ನಾಡಿನ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.ಘಟನೆಯ ಸ್ಥಳಕ್ಕೆ ಹೋಗಿದ್ದ ಡಿಕೆಶಿ ತಿರುಚುವ ಪ್ರಯತ್ನ ಮಾಡಿದ್ದರು. ಅಲ್ಪಸಂಖ್ಯಾತರ ವಿರುದ್ಧ ಆರೋಪ ಬಂದರೆ ಓಟ್ ಬ್ಯಾಂಕ್ ಖಾಲಿ ಆಗುತ್ತದೆ ಎಂಬ ಆತಂಕ ಕಾಂಗ್ರೆಸ್ ನಾಯಕರದ್ದು ಎಂದರು.

- Advertisement -spot_img

More articles

- Advertisement -spot_img

Latest article