ಕಾಂಗ್ರೆಸ್ ನಾಯಕರ ಕುತಂತ್ರದ ರಾಜಕಾರಣದಿಂದ ಜನ ಬೇಸತ್ತಿದ್ದಾರೆ !

Date:

ಶಿವಮೊಗ್ಗ: ದಲಿತ ನಾಯಕನೊಬ್ಬನನ್ನು ಮುಖ್ಯಮಂತ್ರಿ ಮಾಡಲು ಅವರಿಗೆ ಅಡ್ಡಿಯಾಗಿದ್ದಾದರೂ ಏನು? ಅವರ ಕೈಯಲ್ಲೇ ಅಧಿಕಾರವಿತ್ತು ಮಾಡಬಹುದಿತ್ತಲ್ಲ? ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಕಾಂಗ್ರೆಸ್ ನಾಯಕರ ಕುತಂತ್ರದ ರಾಜಕಾರಣದಿಂದ ಜನ ಬೇಸತ್ತಿದ್ದಾರೆ, ದಲಿತ ನಾಯಕನೊಬ್ಬನನ್ನು ಮುಖ್ಯಮಂತ್ರಿ ಮಾಡಲು ಅವರಿಗೆ ಅಡ್ಡಿಯಾಗಿದ್ದಾದರೂ ಏನು? ಅವರ ಕೈಯಲ್ಲೇ ಅಧಿಕಾರವಿತ್ತು ಮಾಡಬಹುದಿತ್ತಲ್ಲ? ಸ್ವಾತಂತ್ರ್ಯ ಬಂದಾಗಿನಿಂದ ದಲಿತ ಮುಖ್ಯಮಂತ್ರಿ ಅನ್ನುತ್ತಾ ಆ ಸಮುದಾಯದ ಜನರಿಗೆ ಬರೀ ಮೋಸ ಮಾಡುತ್ತಾ ಬಂದಿದ್ದಾರೆ ಎಂದು ಈಶ್ವರಪ್ಪ ಹೇಳಿದರು. ಅಸಲು ವಿಷಯವೇನೆಂದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಸುಮ್ಮನಿದ್ದ ಡಿಕೆ ಶಿವಕುಮಾರ್ ಈಗ ಮತ್ತೆ ತಾನು ಮುಖ್ಯಮಂತ್ರಿಯಾಗಬೇಕೆನ್ನುವ ಆಸೆ ವ್ಯಕ್ತಪಡಿಸುತ್ತಿದ್ದಾರೆ. ಅವರನ್ನು ಸುಮ್ಮನಾಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತ ಮತ್ತು ಸಚಿವ ಹೆಚ್ ಸಿ ಮಹದೇವಪ್ಪರನ್ನು ಛೂ ಬಿಟ್ಟಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

Share post:

Subscribe

spot_imgspot_img

Popular

More like this
Related

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್ ಬಡ್ತಿ, 20 ಮಂದಿಗೆ ವರ್ಗಾವಣೆ

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್...

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು ರಾತ್ರಿ...

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಬೆಂಗಳೂರು: ಸಿದ್ದರಾಮಯ್ಯರ...

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ತಿರುವನಂತಪುರ: ವೈವಿಧ್ಯತೆಯ...