ಕುಮಾರಸ್ವಾಮಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಹದಿನಾಲ್ಕು ಜನ ಶಾಸಕರನ್ನು ಅನರ್ಹಗೊಳಿಸಿದ ಬಳಿಕ ಕಾಂಗ್ರೆಸ್ ಪಕ್ಷ ಈ ಹದಿನಾಲ್ಕು ಜನ ಶಾಸಕರಿಗೆ ಮತ್ತೊಂದು ಶಾಕ್ ನೀಡಿದೆ.
ದೋಸ್ತಿ ಸರ್ಕಾರದ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಈ ಶಾಸಕರನ್ನು ಇದೀಗ ಕಾಂಗ್ರೆಸ್ ಪಕ್ಷ ದಿಂದ ಉಚ್ಚಾಟಿಸಲಾಗಿತ್ತು ಕೆಲವೇ ದಿನಗಳ ಹಿಂದೆ ಶಾಸಕತ್ವವನ್ನು ಕಳೆದುಕೊಂಡಿದ್ದ ಶಾಸಕರಿಗೆ ಇದೀಗ ಕಾಂಗ್ರೆಸ್ ನಲ್ಲಿ ಕೂಡ ನೆಲೆ ಇಲ್ಲದಂತಾಗಿದೆ.
ಇದು ಎಲ್ಲ ಮುಖಂಡರಿಗೆ ದೊಡ್ಡ ಆಘಾತವನ್ನು ನೀಡಿದ್ದು ಇವರೆಲ್ಲರೂ ಮುಂದಿನ ದಿನಗಳಲ್ಲಿ ಏನು ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.
ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿ, ಪ್ರತಾಪ್ ಗೌಡ ಪಾಟೀಲ್, ಶಿವರಾಮ್ ಹೆಬ್ಬಾರ್, ಬಿ. ಸಿ. ಪಾಟೀಲ್, ಆರ್. ಶಂಕರ್, ಆನಂದ್ ಸಿಂಗ್, ಡಾ. ಕೆ. ಸುಧಾಕರ್, ಬಿ. ಎ. ಬಸವರಾಜ್, ಎಸ್. ಟಿ. ಸೋಮಶೇಖರ್, ಮುನಿರತ್ನ, ಆರ್. ರೋಷನ್ ಬೇಗ್, ಎಂ. ಟಿ. ಬಿ. ನಾಗರಾಜ್ ಪಕ್ಷದಿಂದ ಉಚ್ಚಾಟನೆಗೊಂಡ ಮಾಜಿ ಶಾಸಕರಾಗಿದ್ದಾರೆ.