ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

Date:

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಉಪಮುಖ್ಯಮಂತ್ರಿಗಳೇ ಕಸ ಗುಡಿಸುವ ಯಂತ್ರಗಳ ಬಗ್ಗೆ ನಾನು ಒಬ್ಬ ಸಾಮಾನ್ಯ ಪ್ರಜೆಯಾಗಿ ಪ್ರಶ್ನೆ ಮಾಡಿದ್ದೇನೆ.ನಿಮಗೆ ಪ್ರಶ್ನೆ ಮಾಡಿದ್ದಲ್ಲ,ನೀವು ಕುಳಿತಿರುವ ಹುದ್ದೆ ಬೆಂಗಳೂರು ಉಸ್ತುವಾರಿಯವರಿಗೆ ಕೇಳಿದ್ದು ಎಂದು ಡಿ.ಕೆ ಶಿವಕುಮಾರ್ ಹೇಳಿಕೆ ಟಾಂಗ್ ನೀಡಿದರು.
ಹುಬ್ಬಳ್ಳಿ ಧಾರವಾಡದಲ್ಲಿ ಇದೇ ಸರ್ಕಾರ ಕಸ ಗುಡಿಸುವ ಮಷಿನ್ ನನ್ನ, 01 ಕೋಟಿ 45 ಲಕ್ಷಕ್ಕೆ 2 ಮಷಿನ್ ಖರೀದಿ ಮಾಡಿದ್ರು, ಯಾಕೆ ಬೇಕಾ ಬಿಟ್ಟಯಾಗಿ 613 ಕೋಟಿ ರೂ ವೆಚ್ಚ ವನ್ನ ಖರ್ಚು ಮಾಡಿ ಬಾಡಿಗೆ ತಗೋತೀರಾ.? ಸ್ವಂತಕ್ಕೆ ಖರೀದಿ ಮಾಡಬಹುದೆಂದು ವರದಿ ನೀಡಿದೆ. ಇದಕ್ಕೆ ಉತ್ತರ ಕೊಡಿ ಲೋಕಯುಕ್ತಗೆ ಯಾಕೆ ಹೋಗ್ಬೇಕು.? ನಿಮಗೆ ಪರಿಜ್ಞಾನ ಇಲ್ವಾ.? ಎಂದು ಡಿಕೆ ಶಿವಕುಮಾರ್ ವಿರುದ್ಧ ನಿಖಿಲ್ ಅವರು ವಾಗ್ದಾಳಿ ನಡೆಸಿದರು.
ಕರ್ನಾಟಕದಲ್ಲಿ 2028 ಚುನಾವಣೆ ಚುನಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಪಕ್ಷವಾಗಿ ಉಳಿಯೋದಿಲ್ಲ. ಬಿಹಾರದ ಚುನಾವಣೆಯಲ್ಲಿ NDA ಮೈತ್ರಿಯನ್ನ ಒಪ್ಪಿಕೊಂಡಿದ್ದಾರೆ. ಇದು ಕಾಂಗ್ರೆಸ್ ಪತನದ ದಿನಗಳು ಅಂತ ಜನರು ಸಂದೇಶ ಕೊಟ್ಟಿದ್ದಾರೆ. ಈ‌ ಸಂದೇಶ ಕಾಂಗ್ರೆಸ್ ನಾಯಕರಿಗೆ ‌ನಿದ್ದೆಗೆಡಿಸಿದೆ ಎಂದು ಹೇಳಿದರು.
JDS ಪಕ್ಷದ ಬಗ್ಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ನಾಯಕರು ಮಾತಾಡಿದ್ರು. 18 ಇದೆ ಒಂದಂಕಿಗೆ ಬಂದು ಜೆಡಿಎಸ್ ನಿಲ್ಲುತ್ತದೆ ಎಂದು ಲೇವಡಿ ಮಾಡಿದ್ರು. ಈಗ ಒಂದಂಕಿಗೆ ಕಾಂಗ್ರೆಸ್ ಬಂದು ನಿಂತಿದೆ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷದ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು. ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಪಕ್ಷವಾಗಿ ಉಳಿಯೋದಿಲ್ಲ.
ಈಗಲಾದರೂ ಕಾಂಗ್ರೆಸ್‌ನವರು ಎಚ್ಚೆತ್ತುಕೊಳ್ಳಬೇಕು. ಇನ್ನೊಂದು ಪಕ್ಷವನ್ನು ಲಘುವಾಗಿ ತಗೊಳ್ಳೋದು, ಅವಹೇಳನ ಮಾಡೋದು ಬಿಡಬೇಕು. ಜನತೆ ಅಧಿಕಾರ ಕೊಟ್ಟಾಗ ಕಾಂಗ್ರೆಸ್ ಅವರು ತಗ್ಗಿ ಬಗ್ಗಿ ಅಧಿಕಾರ ನಡೆಸಬೇಕು ಅಂತ ಪರೋಕ್ಷವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...