No menu items!
18.4 C
Munich
Friday, August 21, 2026

ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾದ ಮಾಜಿ ಸಚಿವ: ಸಿಎಂ ಸಿದ್ದರಾಮಯ್ಯ ಜತೆ ನಾರಾಯಣಗೌಡ ಮಾತುಕತೆ

Must read

ಮಂಡ್ಯ: ಬಿಜೆಪಿ-ಜೆಡಿಎಸ್‌ ಮೈತ್ರಿ ಬೆನ್ನಲ್ಲೇ ಅಸಮಾಧಾನಗೊಂಡಿರುವ ನಾರಾಯಣ ಗೌಡ ಈಗ ಕಾಂಗ್ರೆಸ್‌ ಸೇರ್ಪಡೆ ಆಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ. ಈ ಮಾತಿಗೆ ಪೂರಕ ಎಂಬಂತೆ ಸಿಎಂ ಸಿದ್ದರಾಮಯ್ಯ ಅವರನ್ನು ನಾರಾಯಣ ಗೌಡ ಭೇಟಿಯಾಗಿದ್ದಾರೆ.
ಮಂಡ್ಯ ಕ್ಷೇತ್ರವನ್ನು ಬಿಜೆಪಿಗೆಯೇ ಬಿಟ್ಟುಕೊಡಬೇಕು, ಇಲ್ಲವಾದಲ್ಲಿ ನಾನು ಬೇರೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ನಾರಾಯಣಗೌಡ ಹಿಂದೆ ಬಹಿರಂಗವಾಗಿ ಹೇಳಿದ್ದರು. ಸದ್ಯ ಮಂಡ್ಯ ಕ್ಷೇತ್ರವನ್ನು ಬಹುತೇಕ ಬಿಜೆಪಿ ಜೆಡಿಎಸ್‌ಗೆ ನೀಡಲಿದೆ ಎಂದು ಹೇಳಲಾಗುತ್ತಿದೆ. ಈ ನಿರ್ಧಾರದಿಂದ ನಾರಾಯಣಗೌಡ ಬೇಸರಗೊಂಡಿದ್ದು, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕ ಎಂಬಂತೆ ನಾರಾಯಣಗೌಡ ಸಿದ್ದರಾಮಯ್ಯ ಅವರನ್ನು ಭೇಟಿ ನೀಡಿರುವ ಫೋಟೋವೊಂದು ವೈರಲ್ ಆಗಿದೆ.

- Advertisement -spot_img

More articles

- Advertisement -spot_img

Latest article