“ಕಾಮುಕರಿಗೆ ಗಲ್ಲು ಶಿಕ್ಷೆ ಬಿಟ್ಟು ಬೇರೆ ಯಾವ ಶಿಕ್ಷೆಯೂ ಸರಿಯಲ್ಲ”

admin
By admin
1 Min Read

ಹೈದರಾಬಾದ್ ನಲ್ಲಿ  ಪಶುವೈದ್ಯೆಯ ಗ್ಯಾಂಗ್ ರೇಪ್ ಮತ್ತು ಹತ್ಯೆ ಮಾಡಿ ಕೊಲೆ ಮಾಡಿರುವ ನೀಚ  ಕಾಮುಕರಿಗೆ ಗಲ್ಲು ಶಿಕ್ಷೆ ಆಗಲೇಬೇಕು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಗ್ರಹಿಸಿದ್ದಾರೆ.

ಕಾಮುಕರಿಗೆ ಗಲ್ಲು ಶಿಕ್ಷೆ ಬಿಟ್ಟು ಬೇರೆ ಯಾವ ಶಿಕ್ಷೆಯೂ ಸರಿಯಲ್ಲ. ಆದರೂ ಕೆಲವು ಬಾರಿ ಮಾನವೀಯ ಹಕ್ಕಿನ ಮೇಲೆ ಗಲ್ಲು ಶಿಕ್ಷೆ ಬೇಡ ಎಂದು ವಾದ ಮಾಡುತ್ತಾರೆ. ಇದು ಮಾನವೀಯತೆ ಇಲ್ಲದ ಕ್ರೂರವಾದಂತಹ ಕೃತ್ಯ. ಆದ್ದರಿಂದ ಇಂತಹ ಘಟನೆಯಾದಾಗ ಗಲ್ಲು ಶಿಕ್ಷೆಯೇ ಆಗಬೇಕು. ಅದು ವಿಳಂಬವಾಗಬಾರದು ತೀವ್ರಗತಿಯಲ್ಲಿ ತೀರ್ಪು ಪ್ರಕಟವಾಗಬೇಕು. ತಡವಾದರೆ ಅದರ ಪ್ರಾಮುಖ್ಯತೆ ಹೋಗುತ್ತದೆ ಎಂದು ನ್ಯಾಯಮೂರ್ತಿ ಸಂತೋಷ ಹೆಗ್ಡೆ ಅವರು ಹೇಳಿದರು.

Share This Article