ಕಾರನ್ನು ಹಳ್ಳಕ್ಕೆ ಉರುಳಿಸಿದ್ದಾಳೆ, ಸೂಕ್ತ ಕ್ರಮ ತೆಗೆದುಕೊಳ್ಳಿ : ಪತ್ನಿ ವಿರುದ್ಧ ಪತಿ ಕಂಪ್ಲೇಂಟ್!

Date:

ಕಾರನ್ನು ಹಳ್ಳಕ್ಕೆ ಹಾಕಿದ್ದಾಳೆ. ಅವಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪತಿಯೇ ಪತ್ನ ವಿರುದ್ಧ ಕಂಪ್ಲೇಂಟ್ ಕೊಟ್ಟರಾ ಎಂದು ಆಶ್ಚರ್ಯ ಪಡ್ತಿದ್ದೀರಾ.? ನಂಬಲು ಕಷ್ಟವಾದರೂ ನೀವು ಅದನ್ನು ನಂಬಲೇ ಬೇಕು.
ಕಾರನ್ನು ಹಳ್ಳಕ್ಕೆ ಉರುಳಿಸಿದ ಪತ್ನಿಯ ವಿರುದ್ಧ ಪತಿ ದೂರು ದಾಖಸಿರುವುದು ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ. ಉಡುಪಿ ನಿವಾಸಿ ನಾಗರಾಜ್ ತನ್ನ ಪತ್ನಿ ವಿರುದ್ಧ ದೂರು ನೀಡಿದವರು. ಮಂಜುಳ ಆರೋಪಿ ಪತಿಯಿಂದ ಪೊಲೀಸ್ ಠಾಣೆ ಮೆಟ್ಟಿಲೇರಬೇಕಾದವರು. ಪತ್ನಿ ಅಜಾಗರುಕತೆಯಿಂದ, ವೇಗವಾಗಿ, ಮನಸೋ ಇಒಚ್ಛೆ ಕಾರನ್ನು ಓಡಿಸಿದ್ದರಿಂದ ಹಳ್ಳಕ್ಕೆ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಮಗ, ಮಗಳು ಅತ್ತಿಗೆಗೆ ಗಾಯಗಳಾಗಿವೆ. ಆದ್ದರಿಂದ ಪತ್ನಿಯ ಈ ಕೂಡಲೇ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾಗರಾಜ್ ಆಗ್ರಹಿಸಿದ್ದಾರೆ.


ನಾಗರಾಜ್ ಅವರು ಬಾವ ಪ್ರಭಾಕರ ಮೆಸ್ತಾರ ಬ್ರೀಜಾ ಕಾರಿನಲ್ಲಿ ಪತ್ನಿ ಮಂಜುಳಾ, ಮಗ ಈಶಾನ್ (8), ಪತ್ನಿ ಅಕ್ಕ ಸುಮನಾ ಹಾಗೂ ಅವರ ಮಗಳು ಸುಪ್ರಭಾ (12) ಜೊತೆ ಸಾಗರಕ್ಕೆ ತೆರಳುತ್ತಿದ್ದರು. ನಾಗರಾಜ್ ಅವರ ಪತ್ನಿ ಮಂಜುಳಾ ಕಾರು ಚಲಾಯಿಸುತ್ತಿದ್ದರು. ಹೊಸನಗರದ ರಾಮಚಂದ್ರಪುರ ಗ್ರಾಮದ ಶರಾವತಿ ಸೇತುವೆಯ ಸಮೀಪ ಕಾರು ಹಳ್ಳಕ್ಕೆ ಬಿದ್ದಿದೆ. ಪತ್ನಿ ವೇಗವಾಗಿ, ಅಜಾಗರುಕತೆಯಿಂದ ಕಾರು ಚಾಲನೆ ಮಾಡಿದ್ದರಿಂದಲೇ ಅಪಘಾತವಾಗಿದೆ. ಅವಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ನಾಗರಾಜ್ ದೂರಿನಲ್ಲಿ ತಿಳಿಸಿದ್ದಾರೆ. ಮಂಜುಳಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...