No menu items!
11 C
Munich
Tuesday, June 16, 2026

ಕಾರ್ಯಕರ್ತರಿಗೆ ಕೊಡಲು ತಂದ ತಿಂಡಿಯನ್ನೂ ಒದ್ದು ಬಿಸಾಕಿದ್ದಾರೆ !

Must read

ಬೆಂಗಳೂರು: ನೈಸ್ ರಸ್ತೆ ಬಳಿ ನಮ್ಮ ಬ್ಯಾನರ್, ಬಾವುಟಗಳನ್ನು ಕಿತ್ತು ಬಿಸಾಕಿ, ಕಾರ್ಯಕರ್ತರಿಗೆ ಕೊಡಲು ತಂದ ತಿಂಡಿಯನ್ನೂ ಒದ್ದು ಬಿಸಾಕಿದ್ದಾರೆ ಎಂದು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದರು. ಮೈಸೂರು ಮುಡಾ ಹಗರಣವನ್ನು ಖಂಡಿಸಿ ‘ಮೈಸೂರು ಚಲೋ’ ನಡೆಸಲು ನಗರದಿಂದ ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಮಾಜಿ ಸಚಿವ ಮುನಿರತ್ನ, ಪಕ್ಷದ ಪ್ರಮುಖರು, ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಇದು ಎಂದು ಇದೇ ವೇಳೆ ವಿಜಯೇಂದ್ರ ಅವರು ಟೀಕಿಸಿದರು. ಕಾರ್ಯಕರ್ತರು ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಕೂಗಿದರು. ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ನೂಕಾಟ, ತಳ್ಳುವಿಕೆ ನಡೆಯಿತು.
ಹೋರಾಟವನ್ನು ಹತ್ತಿಕ್ಕುವ ಏಕೈಕ ಉದ್ದೇಶದಿಂದ ಈ ಸರಕಾರವು ಇಂದು ಬೆಳಗ್ಗೆ 7 ಗಂಟೆಗೇ ನಮ್ಮ ಮುಖಂಡರನ್ನು ಬಂಧಿಸಿದೆ. ನೈಸ್ ರಸ್ತೆ ಬಳಿ ನಮ್ಮ ಬ್ಯಾನರ್, ಬಾವುಟಗಳನ್ನು ಕಿತ್ತು ಬಿಸಾಕಿ, ಕಾರ್ಯಕರ್ತರಿಗೆ ಕೊಡಲು ತಂದ ತಿಂಡಿಯನ್ನೂ ಒದ್ದು ಬಿಸಾಕಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು.

- Advertisement -spot_img

More articles

- Advertisement -spot_img

Latest article