ಕಾಲುಂಗರದಿಂದ ಕೆಲವು ಕಾಯಿಲೆಗಳನ್ನು ತಡೆಗಟ್ಟಬಹದಾ?

Date:

ಭಾರತೀಯ ಹಿಂದೂ ಸಂಪ್ರದಾಯದಲ್ಲಿ ಕಾಲುಂಗುರಕ್ಕೆ ಹೆಚ್ಚಿನ ಮಹತ್ವ ಇದೆ. ಮದುವೆಯಾದ ಮಹಿಳೆ ಧರಿಸಲೇಬೇಕಾದ ಒಂದು ಮುಖ್ಯವಾದ ಮಂಗಳಕರ ವಸ್ತು ಕಾಲುಂಗರ. ಆದ್ರೆ ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಗಾಗಿ, ಡೆಕೋರೇಟಿವ್ ಜ್ಯುವೆಲ್ಲರಿ ಆಗಿ ಇದನ್ನು ಧರಿಸುತ್ತಾರೆ. ಕಾಲುಂಗುರ ಎಂಬುದು ಮುತ್ತೈದೆಯ ಬಹು ಮುಖ್ಯ ಆಭರಣ. ಇದು ಕೇವಲ ಸಂಪ್ರಾದಾಯ ಮಾತ್ರವಾಗಿಲ್ಲ ಇದು ಆರೋಗ್ಯಕ್ಕೂ ಉತ್ತಮ ಗೊತ್ತಾ..? ಕಾಲುಂಗರ ತೊಡೋದ್ರಿಂದ ಕಾಯಿಲೆಯನ್ನು ದೂರು ಮಾಡಬಹುದು ಗೊತ್ತಾ?.. ಅದು ಯಾವುದು ಅಂತಾ ಮುಂದೆ ಓದಿ..
ಹೌದು.. ಭೂಮಿಯಿಂದ ಧ್ರುವೀಯ ಶಕ್ತಿಯನ್ನು ಹೀರಿಕೊಂಡು ದೇಹದಲ್ಲಿ ಹಾದು ಹೋಗಲು ಬೆಳ್ಳಿ ನೆರವಾಗುತ್ತದೆ. ದೇಹದಲ್ಲಿ ಇದು ಅನೇಕ ಬದಲಾವಣೆಗಳನ್ನು ತರುತ್ತಂತೆ. ಕಾಲುಂಗುರ ಹಾಕುವ ಎರಡನೇ ಬೆರಳಿನಲ್ಲಿ ಪ್ರೆಷರ್ ಪಾಯಿಂಟ್ ಇದ್ದು ಈ ಬೆರಳಿಗೆ ಬೆಳ್ಳಿ ಕಾಲುಂಗುರವನ್ನು ಧರಿಸುವುದರಿಂದ ಮಹಿಳೆಯರ ಋತು ಚಕ್ರ ಸಮಸ್ಯೆ ತಡೆಯಬಹುದು. ಇದರಿಂದ ಪಿರಿಯಡ್ಸ್ ಸರಿಯಾಗಿ ಆಗುತ್ತದಂತೆ. ಕಾಲುಂಗುರ ಹಾಕುವುದರಿಂದ ರಕ್ತ ಸಂಚಾರ ಸಮಪರ್ಕಗೊಂಡು, ಗರ್ಭಕೋಶವನ್ನು ಆರೋಗ್ಯವಾಗಿಡಬಹುದು. ಕಾಲಿನ ಕೆಲವು ನರಗಳು ಉತ್ತೇಜನಗೊಳ್ಳುತ್ತದೆ. ಇದರಿಂದ ಸಂತಾನೋತ್ಪತ್ತಿಯೂ ಚೆನ್ನಾಗಿರುತ್ತದೆ. ಕಾಲುಂಗುರದಿಂದ ಬೆರಳಿನ ಮೇಲೆ ಒತ್ತಡ ಉಂಟಾಗುತ್ತೆ. ಇದರಿಂದ ಅಲ್ಲಿರುವ ನರದ ಮೇಲೆ ಪ್ರೆಷರ್ ಬಿದ್ದು, ದೇಹಕ್ಕೆ ಮಸಾಜ್ ಸಿಕ್ಕಿಂತಾಗುತ್ತದೆ. ಇದು ಹಲವು ಸ್ತ್ರೀ ಸಂಬಂಧಿ ರೋಗಗಳಿಗೂ ರಾಮಬಾಣ. ದೇಹದ ಎಲ್ಲಾ ಅಂಗಾಗಳನ್ನೂ ರಿಫ್ರೆಶ್ ಆಗಲು ಕಾಲುಂಗುರ ಧರಿಸುವುದು ಉತ್ತಮ. ಕಾಲುಂಗುರ ಧರಿಸುವುದರಿಂದ ಮಹಿಳೆಯ ಹೊಟ್ಟೆಯಲ್ಲಿರುವ ಮಗುವೂ ಆರೋಗ್ಯವಾಗಿ ಬೆಳವಣಿಗೆಯಾಗುತ್ತದೆ. ಕಾಲುಂಗುರ ನಕರಾತ್ಮಕತೆ ನಿವಾರಿಸುತ್ತದೆ. ಇದು ಗರ್ಭಿಣಿಯರು ಮಾನಸಿಕವಾಗಿ ಆರೋಗ್ಯದಿಂದಿರಲು ಸಹಕರಿಸುತ್ತೆ. ಬೆಳ್ಳಿ ವಸ್ತು ದೇಹವನ್ನು ತಂಪಾಗಿರಿಸುತ್ತವೆ. ಇದನ್ನು ಧರಿಸುವುದರಿಂದ ಪೊಸಿಟಿವ್ ಎನರ್ಜಿ ದೇಹದಲ್ಲಿ ಸಂಚಾರವಾಗುತ್ತದೆ. ಬ್ಲಡ್ ಪ್ರೆಶರ್ ಸಮಸ್ಯೆ ನಿರಾಳವಾಗಲು ಬೆಳ್ಳಿ ಕಾಲುಂಗುರ ನೆರವಾಗುತ್ತದೆ. ಇವಿಷ್ಟೂ ಕಾಲುಂಗರ ತೊಡುವುದರಿಂದ ಇಷ್ಟೇಲ್ಲಾ ಉಪಯೋಗವಾಗುತ್ತದಂತೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...