ಕಾಲ್ತುಳಿತ ಕೇಸ್: ಇಂತಹ ಘಟನೆ ಕ್ರಿಕೆಟ್ ಇತಿಹಾಸದಲ್ಲೇ ನಡೆದಿರಲಿಲ್ಲ – ಜಿ. ಪರಮೇಶ್ವರ್!

Date:

ಕಾಲ್ತುಳಿತ ಕೇಸ್: ಇಂತಹ ಘಟನೆ ಕ್ರಿಕೆಟ್ ಇತಿಹಾಸದಲ್ಲೇ ನಡೆದಿರಲಿಲ್ಲ – ಜಿ. ಪರಮೇಶ್ವರ್!

ಬೆಂಗಳೂರು:- ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಘಟನೆ ಕ್ರಿಕೆಟ್ ಇತಿಹಾಸದಲ್ಲೇ ಆಗಿರಲಿಲ್ಲ. ಮೊದಲು ಸಾವನ್ನಪ್ಪಿದವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ ವರ್ಗದವರಿಗೆ ದು:ಖ ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ಬುಧವಾರ ಸಿಎಂ ಎಲ್ಲಾ ಮಾಹಿತಿ ಪಡೆದು ಮಾತನಾಡಿದ್ದಾರೆ. ಯಾರೇ ತಪ್ಪು ಮಾಡಿದ್ದರೂ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಈಗ ಯಾವುದೇ ವಿವರಣೆ ಕೊಡಲ್ಲ. ಮ್ಯಾಜಿಸ್ಟ್ರೇಟ್ ತನಿಖೆ ಆದ ನಂತರ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದರು.

ಘಟನೆಯಲ್ಲಿ 11 ಜನ ಸಾವನ್ನಪ್ಪಿದ್ದು, 56 ಮಂದಿ ಗಾಯಗೊಂಡಿದ್ದಾರೆ. 46 ಗಾಯಾಳುಗಳು ಮನೆಗೆ ಹೋಗಿದ್ದಾರೆ. 10 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವವರಿಗೆ ಗಂಭೀರ ಗಾಯಗಳೇನೂ ಆಗಿಲ್ಲ, ಆತಂಕ ಇಲ್ಲ. ಮುಂದೆ ಇಂಥ ವಿಜಯೋತ್ಸವಗಳು ನಡೆಸುವ ಸಂದರ್ಭ ಬಂದಾಗ ಪೊಲೀಸ್ ನಿರ್ದೇಶನಗಳ ಚೌಕಟ್ಟಿನೊಳಗೇ ಮಾಡುತ್ತೇವೆ. ಇದಕ್ಕಾಗಿ ಹೊಸ ಎಸ್‌ಒಪಿ ಮಾಡುತ್ತೇವೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...