ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು: ಸಿಎಂ ಸಿದ್ದರಾಮಯ್ಯ

Date:

ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ.
ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿಯೂ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.
ಇನ್ನೂ ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಕಾಶ್ಮೀರಕ್ಕೆ ತೆರಳಿರುವ 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳುಹಿಸಲಾಗಿದೆ ಎಂದರು.

Share post:

Subscribe

spot_imgspot_img

Popular

More like this
Related

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ದರ ಎಷ್ಟಿದೆ ನೋಡಿ

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ದರ...

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಮೂಸಂಬಿ ಜ್ಯೂಸ್​​ ಕುಡಿಯೋದ್ರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?

ಮೂಸಂಬಿ ಜ್ಯೂಸ್​​ ಕುಡಿಯೋದ್ರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ? ಮೂಸಂಬಿ ಹಣ್ಣು ಯಾವ...

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ ಇತಿಹಾಸದುದ್ದಕ್ಕೂ...