ಕಿಚ್ಚ ಸುದೀಪ್​ಗೆ ಮತ್ತೆ ‘ವಿಲನ್​’ ಪ್ರೇಮ್ ಆ್ಯಕ್ಷನ್​ ಕಟ್​..!

Date:

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಪೈಲ್ವಾನ್ ಸಿನಿಮಾ 5 ಭಾಷೆಗಳಲ್ಲಿ ಸೆಪ್ಟೆಂಬರ್ 12ರಂದು ರಿಲೀಸ್ ಆಗುತ್ತಿದೆ. ಕೋಟಿಗೊಬ್ಬ 3 ಕೂಡ ರೆಡಿಯಾಗ್ತಿದೆ. ಅಕ್ಟೋಬರ್ 2ಕ್ಕೆ ಚಿರಂಜೀವಿ ನಟನೆಯ ಸೈರಾ ನರಸಿಂಹ ರೆಡ್ಡಿ ಕನ್ನಡ ಸೇರಿದಂತೆ ಪಂಚ ಭಾಷೆಗಳಲ್ಲಿ ಬರಲಿದೆ. ಈ ಸಿನಿಮಾದಲ್ಲೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿದ್ದಾರೆ. ದಬಾಂಗ್-3ನಲ್ಲೂ ನಟಿಸಿದ್ದಾರೆ.
ಸುದೀಪ್ ಕನ್ನಡ ಮಾತ್ರವಲ್ಲದೆ ಟಾಲಿವುಡ್, ಬಾಲಿವುಡ್ ಜೊತೆ ಜೊತೆಗೆ ಹಾಲಿವುಡ್​ ಸಿನಿಮಾದಲ್ಲೂ ಬ್ಯುಸಿ ಇದ್ದಾರೆ. ರಂಗಿತರಂಗ ಡೈರೆಕ್ಟರ್ ಅನೂಪ್ ಬಂಡಾರಿ ಜೊತೆ ಬಿಲ್ಲಾ ರಂಗ ಭಾಷ ಸಿನಿಮಾ ಮಾಡಲಿದ್ದಾರೆ. ಈ ಎಲ್ಲಾ ಸಿನಿ ಸುದ್ದಿಗಳ ನಡುವೆ ಜೋಗಿ ಪ್ರೇಮ್ ಮತ್ತು ಸುದೀಪ್ ಕಾಂಬಿನೇಷನ್​ನಲ್ಲಿ ಮತ್ತೊಂದು ಸಿನಿಮಾ ಸೆಟ್ಟೇರಲಿದೆ. ಸುದೀಪ್ ಮತ್ತು ಪ್ರೇಮ್ ಮತ್ತೆ ಒಂದಾಗಲಿದ್ದಾರೆ.


ಪ್ರೇಮ್ ಕರುನಾಡ ಚಕ್ರವರ್ತಿ ಡಾ. ಶಿವರಾಜ್​ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಸುದೀಪ್ ಅವರನ್ನು ಸೇರಿಸಿಕೊಂಡು ದಿ ವಿಲನ್ ಸಿನಿಮಾ ಮಾಡಿದ್ದರು.. ವಿಲನ್ ಒಂದು ರೇಂಜಿಗೆ ಹಿಟ್​​ ಆಗಿದ್ದು ಈಗ ಮತ್ತೆ ಸುದೀಪ್ ಮತ್ತು ಪ್ರೇಮ್ ಕಾಂಬಿನೇಷನ್​ನಲ್ಲಿ ಸಿನಿಮಾ ಬರಲಿದೆ. ಏಕ್ ಲವ್ ಯಾ ಸಿನಿಮಾದಲ್ಲಿ ಪ್ರೇಮ್ ಬ್ಯುಸಿ ಇದ್ದಾರೆ. ಏಕ್ ಲವ್ ಯಾ ಮುಗಿದ ಮೇಲೆ ಈ ಸುದೀಪ್ ಮೂವಿಯನ್ನು ಪ್ರೇಮ್ ಕೈಗೆತ್ತಿಕೊಳ್ಳಲಿದ್ದಾರೆ.
ಬಾದ್ ಷಾ ಸುದೀಪ್ ಮತ್ತು ಪ್ರೇಮ್ ಜೋಡಿ ಮ್ಯಾಜಿಕ್ ಮಾಡಲು ರೆಡಿಯಾಗಿದ್ದು ಬಿಗ್ ಬಜೆಟ್ ಮೂವಿ ಎನ್ನಲಾಗಿದೆ. ಇನ್ನು ಪೈಲ್ವಾನ್ ಬಹು ಭಾಷೆಯಲ್ಲಿ ಬರುತ್ತಿರುವುದಲ್ಲದೆ , ಕನ್ನಡದಲ್ಲಿ ಪ್ಯಾನ್ ಇಂಡಿಯಾ ಮೂವಿಗಳು ಹೆಚ್ಚಾಗುತ್ತಿವೆ. ಹೀಗಾಗಿ ಸುದೀಪ್ -ಪ್ರೇಮ್ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಸಿನಿಮಾ ಆಗುವ ನಿರೀಕ್ಷೆಯಿದೆ.
ಸುದೀಪ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ.. ಪ್ರೇಮ್ ಕೂಡ ಸುದೀಪ್ ಗೆ ಮತ್ತೊಂದು ಸಿನಿಮಾ ಮಾಡ ಸೆಟ್ಟೇರುತ್ತಿರುವುದು ಸುದೀಪ್ ಅಭಿಮಾನಿಗಳಿಗೆ ಹಬ್ಬ..

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...