ಕಿಚ್ಚ ಸುದೀಪ್ ಅವರ ಟ್ವಿಟ್ಟರ್ ಅಕೌಂಟ್ ನ ಪ್ರೊಫೈಲ್ ಚಿತ್ರ ಬದಲಾದ ತಕ್ಷಣ ಅಭಿಮಾನಿಗಳು ಹಾಗೂ ತಮ್ಮ ಆಪ್ತರು ಅವರ ಪ್ರೊಫೈಲ್ ಫೋಟೊ ಯಾರದ್ದು ಎಂದು ಯೋಚಿಸುತ್ತಿದ್ದಾಗಲೇ ತಿಳಿಯಿತು ಅವರು ಸುದೀಪ್ ಅಪ್ಪಟ ಅಭಿಮಾನಿ ಮಾತ್ರವಲ್ಲದೆ ಸಹೋದರನಂತೆ ಇದ್ದರು. ನಂದೀಶ್ ನಿಧನದ ಸುದ್ದಿ ಕೇಳಿ ಸುದೀಪ್ ಟ್ವಿಟ್ಟರ್ ನಲ್ಲಿ ನೋವು ಹಂಚಿಕೊಂಡಿದ್ದಾರೆ.
ಅಲ್ಲದೆ ಕಿಚ್ಚ ಟ್ವಿಟ್ಟರ್ ಡಿಪಿ ಬದಲಾಯಿಸಿ ನಂದೀಶ್ ಫೋಟೋ ಡಿಪಿಗೆ ಹಾಕಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ. “ನನ್ನ ಸಹೋದರ ಸ್ಥಾನದಲ್ಲಿದ್ದ ನಂದೀಶ್ ಅವರ ಸಾವಿನ ಸುದ್ದಿ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಆನೇಕ ವರ್ಷಗಳಿಂದ ನಮ್ಮೊಂದಿಗೆ ಇದ್ದರು. ತುಂಬ ಮಿಸ್ ಮಾಡಿಕೊಳ್ಳುತ್ತೀವಿ. ಇದು ತುಂಬಲಾರದ ನಷ್ಟ. ನಿಮ್ಮ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಕುಟುಂಬಕ್ಕೆ ನೀಡಲಿ” ಎಂದುು ಸುದೀಪ್ ಟ್ವೀಟ್ ಮಾಡಿದ್ದಾರೆ .