ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲೂ ಇವೆ ನಿಮ್ಮ ದೇಹಕ್ಕೆ ಬೇಕಾಗುವ ಪೋಷಕಾಂಶಗಳು..! ಇಲ್ಲಿದೆ ಮಾಹಿತಿ

Date:

ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲೂ ಇವೆ ನಿಮ್ಮ ದೇಹಕ್ಕೆ ಬೇಕಾಗುವ ಪೋಷಕಾಂಶಗಳು..! ಇಲ್ಲಿದೆ ಮಾಹಿತಿ

 

ಕಿತ್ತಳೆ ಹಣ್ಣಿನ ಸಿಪ್ಪೆ ಕೂಡ ಆರೋಗ್ಯಕ್ಕೆ ಉತ್ಕೃಷ್ಟ ಪ್ರಯೋಜನಗಳನ್ನು ನೀಡುತ್ತದೆ. ನೀವೇನಾದರು ಕಿತ್ತಳೆ ಹಣ್ಣು ಮಾತ್ರ ತಿಂದು ಸಿಪ್ಪೆ ಬಿಸಾಡುತ್ತಿದ್ದರೆ ಅನೇಕ ಜೀವಸತ್ವಗಳನ್ನು ಕಳೆದುಕೊಂಡಂತೆಯೇ ಸರಿ. ಹಾಗಾದರೆ ಕಿತ್ತಳೆ ಸಿಪ್ಪೆ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳನ್ನು ನೀಡುತ್ತದೆ. ಹೇಗೆ ಬಳಸಬೇಕು ಎನ್ನುವ ಮಾಹಿತಿ ಇಲ್ಲಿದೆ ನೋಡಿ.

ನೈಸರ್ಗಿಕ ಬ್ಲೀಚ್‌ ಆಗಿ ಕಾರ್ಯನಿರ್ವಹಣೆಕಿತ್ತಳೆ ಹಣ್ಣಿನ ಸಿಪ್ಪೆಯು ನೈಸರ್ಗಿಕ ಬ್ಲೀಚ್ ಆಗಿ ಕಾರ್ಯ ನಿರ್ವಹಿಸಲಿದೆ, ಬಹುತೇಕ ವಿಟಮಿನ್‌ ಸಿ ಯುಕ್ತ ಹಣ್ಣುಗಳು ನೈಸರ್ಗಿಕವಾಗಿ ಬ್ಲೀಚಿಂಗ್‌ ಏಜೆಂಟ್‌ಗಳಾಗಿ ಕಾರ್ಯ ನಿರ್ವಹಿಸುತ್ತವೆ. ಇದು ಚರ್ಮದ ಮೇಲಿರುವ ಕಪ್ಪು ಕಲೆಗಳನ್ನು ಲೈಟನಿಂಗ್ ಮಾಡುತ್ತದೆ. ಕಿತ್ತಳೆ ಸಿಪ್ಪೆಯ ಪುಡಿಯು ಬಹಳಷ್ಟು ಉತ್ತಮ ಮೂಲವನ್ನು ಹೊಂದಿದ್ದು, ಚರ್ಮದ ನೈಸರ್ಗಿಕ ಬಣ್ಣವನ್ನು ಪುನಃಸ್ಥಾಪಿಸಲು ಉತ್ತೇಜಿಸುತ್ತದೆ.
ನಿದ್ರೆಗೆ ಸಹಾಯ ಮಾಡುತ್ತದೆ :ಕಿತ್ತಳೆ ಸಿಪ್ಪೆಯನ್ನು ನೀರಿನಲ್ಲಿ ಹಾಕಿ ಚೆನ್ನಾಗಿ ಕುದಿಸಿ. ನಂತರ ಈ ನೀರನ್ನು ಕುಡಿಯಿರಿ ಇದರಿಂದ ನಿದ್ರಾಹೀನತೆ ದೂರವಾಗುತ್ತದೆ. ರಾತ್ರಿ ಚೆನ್ನಾಗಿ ನಿದ್ದೆ ಬರುತ್ತದೆ.
ಮೊಡವೆ ಮತ್ತು ಕಲೆಯನ್ನು ದೂರ ಮಾಡುತ್ತದೆಕಿತ್ತಳೆ ಸಿಪ್ಪೆಯ ಪುಡಿಯು ವಿಟಮಿನ್‌ ಸಿಯಲ್ಲಿ ಹೇರಳವಾಗಿದ್ದು, ಇದು ಚರ್ಮದ ಕಾಲಜನ್‌ ಮತ್ತು ಎಲಾಸ್ಟಿನ್‌ ಅನ್ನು ರೂಪಿಸಲು ಉತ್ತೇಜಿಸುತ್ತದೆ. ಕಿತ್ತಳೆ ಸಿಪ್ಪೆಗಳು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿರುವುದರಿಂದ, ಇದು ನಿಮಗೆ ದೋಷರಹಿತ ಚರ್ಮವನ್ನು ನೀಡುತ್ತದೆ. ಅಲ್ಲದೆ, ಮೊಡವೆಗಳನ್ನು ರೂಪಿಸುವ ಬ್ಯಾಕ್ಟೀರಿಯಾಗಳ ಮೇಲೆ ಹೋರಾಡುತ್ತದೆ.
ರೋಗನಿರೋಧಕ ಶಕ್ತಿ ಹೆಚ್ಚಳಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಆಂಟಿ ಇಂಫ್ಲಮೇಟರಿ ಗುಣವಿರುತ್ತದೆ. ಕಿತ್ತಳೆ ಸಿಪ್ಪೆಯು ರೋಗನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಕಿತ್ತಳೆ ಸಿಪ್ಪೆಯನ್ನು ಸಕ್ಕರೆ ಮತ್ತು ನಿಂಬೆಯೊಂದಿಗೆ ತಿನ್ನಬಹುದು.
ಹೇರ್ ಕಂಡಿಷನರ್ ಆಗಿ ಬಳಕೆಈ ಹಣ್ಣಿನ ಸಿಪ್ಪೆಯಲ್ಲಿ ಕೂದಲಿಗೆ ಪ್ರಯೋಜನಕಾರಿಯಾದ ಕ್ಲೆನ್ಸಿಂಗ್ ಗುಣಗಳು ಇರುತ್ತವೆ. ಇದಕ್ಕಾಗಿ ಕಿತ್ತಳೆ ಸಿಪ್ಪೆಯನ್ನು ಒಣಗಿಸಿ ಪುಡಿ ಮಾಡಿ, ನಂತರ ಅದರಲ್ಲಿ ಜೇನು ತುಪ್ಪವನ್ನು ಬೆರೆಸಿ ತಲೆ ಕೂದಲಿಗೆ ಹಚ್ಚಿಕೊಳ್ಳಿ.
ಕೂದಲು ಹೊಟ್ಟಿನಿಂದ ಮುಕ್ತಿಕಿತ್ತಳೆ ಸಿಪ್ಪೆಯನ್ನು ಒಣಗಿಸಿ ಪುಡಿಯನ್ನು ತಯಾರಿಸಿ ನಂತರ ಅದರಲ್ಲಿ ತೆಂಗಿನ ಎಣ್ಣೆಯನ್ನು ಬೆರೆಸಿ. ಈ ಮಿಶ್ರಣವನ್ನು ಕೂದಲಿಗೆ ಹಚ್ಚುವುದರಿಂದ ತಲೆಹೊಟ್ಟು ದೂರವಾಗುತ್ತದೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...