ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

Date:

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಬಿ, ಉತ್ಕರ್ಷಣ ನಿರೋಧಕಗಳು, ಅಮೀನೋ ಆಮ್ಲಗಳು, ಕ್ಯಾಲ್ಸಿಯಂ, ಅಯೋಡಿನ್, ರಂಜಕ ಹಾಗೂ ಫೈಬರ್ ಸೇರಿದಂತೆ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಕಿತ್ತಳೆ ಹಣ್ಣು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ. ಆದರೆ ಹೆಚ್ಚಿನ ಜನರು ಹಣ್ಣನ್ನು ಸೇವಿಸಿ ಅದರ ಸಿಪ್ಪೆಯನ್ನು ತ್ಯಜಿಸುತ್ತಾರೆ. ವಾಸ್ತವದಲ್ಲಿ, ಕಿತ್ತಳೆ ಹಣ್ಣಿನಂತೆಯೇ ಅದರ ಸಿಪ್ಪೆಯೂ ಆರೋಗ್ಯ ಮತ್ತು ಸೌಂದರ್ಯಕ್ಕೆ ಅಪಾರ ಲಾಭಗಳನ್ನು ಹೊಂದಿದೆ.

ಕಿತ್ತಳೆ ಸಿಪ್ಪೆಯನ್ನು ಒಣಗಿಸಿ ಪುಡಿ ಮಾಡಿಕೊಂಡು ಬಳಸಬಹುದು. ಮುಖದ ಸೌಂದರ್ಯ ವೃದ್ಧಿಯಿಂದ ಹಿಡಿದು ಗಿಡಮೂಲಿಕೆ ಚಹಾ ತಯಾರಿಸುವವರೆಗೆ ಹಲವು ರೀತಿಯಲ್ಲಿ ಇದನ್ನು ಉಪಯೋಗಿಸಬಹುದು. ಹಾಗಾದರೆ, ಕಿತ್ತಳೆ ಸಿಪ್ಪೆಯ ಪ್ರಮುಖ ಪ್ರಯೋಜನಗಳು ಯಾವುವು ಎಂಬುದನ್ನು ನೋಡೋಣ.

ಜೀರ್ಣಕ್ರಿಯೆಗೆ ಸಹಕಾರಿ

ಕಿತ್ತಳೆ ಸಿಪ್ಪೆಯಲ್ಲಿ ಇರುವ ಫೈಬರ್ ಮಲಬದ್ಧತೆ, ಅಜೀರ್ಣ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಕಿತ್ತಳೆ ಸಿಪ್ಪೆಯ ಪುಡಿಯನ್ನು ನೀರಿನೊಂದಿಗೆ ಸೇವಿಸಬಹುದು.

ತಲೆಹೊಟ್ಟು ನಿವಾರಣೆ

ಕಿತ್ತಳೆ ಸಿಪ್ಪೆಯ ಪುಡಿಯನ್ನು ತೆಂಗಿನ ಎಣ್ಣೆಯೊಂದಿಗೆ ಮಿಶ್ರಣ ಮಾಡಿ ಕೂದಲಿಗೆ ಹಚ್ಚಿದರೆ ತಲೆಹೊಟ್ಟು ಸಮಸ್ಯೆ ಕಡಿಮೆಯಾಗುತ್ತದೆ.

ಚರ್ಮದ ಸೌಂದರ್ಯ ಹೆಚ್ಚಳ

ಕಿತ್ತಳೆ ಸಿಪ್ಪೆಯ ಪುಡಿ ಮೊಡವೆ, ಕಲೆಗಳನ್ನು ಕಡಿಮೆ ಮಾಡಲು ಸಹಕಾರಿ. ಇದರಲ್ಲಿರುವ ವಿಟಮಿನ್ ಸಿ ಹಾಗೂ ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಹೊಳೆಯುವಂತೆ ಮಾಡುತ್ತವೆ. ಚರ್ಮದ ಎಣ್ಣೆ ನಿಯಂತ್ರಣ ಹಾಗೂ ಸುಕ್ಕು ಕಡಿಮೆ ಮಾಡಲು ಸಹ ಇದು ಸಹಾಯ ಮಾಡುತ್ತದೆ.

ರೋಗನಿರೋಧಕ ಶಕ್ತಿ ವೃದ್ಧಿ

ಕಿತ್ತಳೆ ಸಿಪ್ಪೆಯಲ್ಲಿಯೂ ವಿಟಮಿನ್ ಸಿ ಸಮೃದ್ಧವಾಗಿದೆ. ಇದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಕಿತ್ತಳೆ ಸಿಪ್ಪೆಯಿಂದ ತಯಾರಿಸಿದ ಚಹಾವನ್ನು ನಿಯಮಿತವಾಗಿ ಕುಡಿಯಬಹುದು.

 ತೂಕ ಇಳಿಸಿಕೊಳ್ಳಲು ಸಹಾಯಕ

ತೂಕ ಕಡಿಮೆ ಮಾಡಿಕೊಳ್ಳಲು ಬಯಸುವವರು ಕಿತ್ತಳೆ ಸಿಪ್ಪೆ ಚಹಾವನ್ನು ಸೇವಿಸಬಹುದು. ಇದರಲ್ಲಿ ಇರುವ ಫೈಬರ್ ಹಸಿವನ್ನು ನಿಯಂತ್ರಿಸಿ ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ.

ಕೈ–ಕಾಲುಗಳ ಸ್ವಚ್ಛತೆ

ಕಿತ್ತಳೆ ಸಿಪ್ಪೆ ನೈಸರ್ಗಿಕ ಕ್ಲೆನ್ಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಕೈ ಮತ್ತು ಪಾದಗಳನ್ನು ಉಜ್ಜುವುದರಿಂದ ಸತ್ತ ಚರ್ಮದ ಕೋಶಗಳು ತೆಗೆಯಲ್ಪಟ್ಟು ಚರ್ಮ ಮೃದು ಹಾಗೂ ಸ್ವಚ್ಛವಾಗಿರುತ್ತದೆ.

ಬಾಯಿಯ ದುರ್ವಾಸನೆ ನಿವಾರಣೆ

ಕಿತ್ತಳೆ ಸಿಪ್ಪೆಯಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಬಾಯಿಯಲ್ಲಿನ ಹಾನಿಕರ ಜೀವಾಣುಗಳನ್ನು ನಾಶಪಡಿಸುತ್ತವೆ. ಸಿಪ್ಪೆಯನ್ನು ಅಗಿಯುವುದರಿಂದ ಬಾಯಿಯ ದುರ್ವಾಸನೆ ಕಡಿಮೆಯಾಗುತ್ತದೆ. ಕಿತ್ತಳೆ ಸಿಪ್ಪೆಯಿಂದ ತಯಾರಿಸಿದ ಬಾಯಿ ಮುಕ್ಕಳಿಸುವ ದ್ರವ ಗಂಟಲು ಸಮಸ್ಯೆಗೂ ಶಮನ ನೀಡುತ್ತದೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...