‘ಕಿವೀ’ಸ್ ಹಿಂಡಿದ ಕನ್ನಡಿಗ ರಾಹುಲ್, ಶ್ರೇಯಸ್ ಅಯ್ಯರ್! ಹೇಗಿತ್ತು ಗೊತ್ತೇನ್ರಿ ನಮ್ ಹುಡ್ಗನ ಬ್ಯಾಟಿಂಗ್ ವೈಭವ?

Date:

ಕನ್ನಡಿಗ ಕೆ.ಎಲ್ ರಾಹುಲ್ ಮತ್ತೊಮ್ಮೆ ನ್ಯೂಜಿಲೆಂಡ್ ಬೌಲರ್ ಗಳನ್ನು ದಂಡಿಸಿದ್ದಾರೆ. ರಾಹುಲ್ ಭರ್ಜರಿ ಬ್ಯಾಟಿಂಗ್ ನಿಂದ ಭಾರತ 2ನೇ ಟಿ20 ಪಂದ್ಯದಲ್ಲೂ ಭರ್ಜರಿ ಜಯ ದಾಖಲಿಸಿದೆ. 

ಆಂಕ್ಲೆಂಟ್ ನ ಈಡನ್ ಪಾರ್ಕ್ ನಲ್ಲಿ ನಡೆದ ಮ್ಯಾಚಲ್ಲಿ ಟಾಸ್ ಗೆದ್ದ ಕೇನ್ ವಿಲಿಯಂ ಸನ್ ನಾಯಕತ್ವದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡಿತು. ಭಾರತದ ದಾಳಿಗೆ ಆಡಲಾಗದೆ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 132 ರನ್ ಮಾತ್ರಗಳಿಸಿತು. ರವೀಂದ್ರ ಜಡೇಜ ( 2 ವಿಕೆಟ್) ಶಾರ್ದೂಲ್ ಠಾಕೂರ್ , ಬೂಮ್ರಾ, ಶಿವಂ ದುಬೆ ತಲಾ 1 ವಿಕೆಟ್ ಪಡೆದರು.
ಬಳಿಕ ಗುರಿ ಬೆನ್ನತ್ತಿದ ಭಾರತ ಆರಂಭದಲ್ಲೇ ರೋಹಿತ್ ಶರ್ಮಾ ( 8) ಹಾಗೂ ಅವರ ಬೆನ್ನಲ್ಲೇ ಕ್ಯಾಪ್ಟನ್ ವಿರಾಟ್ ಕೊಹ್ಲಿ (11) ವಿಕೆಟ್ ಕಳೆದುಕೊಂಡಿತು. ಆದರೆ ಕನ್ನಡಿಗ ರಾಹುಲ್ ತಂಡಕ್ಕೆ ಆಸರೆಯಾದರು. ರಾಹುಲ್ ಅಜೇಯ ಅರ್ಧಶತಕ ( 57) ರನ್ ಸಿಡಿಸಿದರು. ಅವರಿಗೆ ಸಾಥ್ ನೀಡಿದ ಕಳೆದ ಮ್ಯಾಚಿನ ಮತ್ತೊಬ್ಬ ಹೀರೋ ಶ್ರೇಯಸ್ ಅಯ್ಯರ್ (44) ಗೆಲುವಲ್ಲಿ ಪ್ರಮುಖ ಪಾತ್ರವಹಿಸಿದರು. ಭಾರತ ಶಿವಂ ದುಬೆ ಅಜೇಯ 8 ರನ್ ಮಾಡಿದ್ರು. ಭಾರತ 2.3 ಓವರ್ ಗಳು ಬಾಕಿ ಇರುವಂತೆಯೇ 7 ವಿಕೆಟ್ ಗಳ ಜಯ ದಾಖಲಿಸಿತು.

Share post:

Subscribe

spot_imgspot_img

Popular

More like this
Related

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....

ಬ್ರಹ್ಮಚಾರಿಣಿಯ ಪೂಜಾ ವಿಧಾನ !

ನವರಾತ್ರಿಯ ಎರಡನೇ ದಿನದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಆರಾಧಿಸಲಾಗುತ್ತದೆ.ಇವರು ತಪಸ್ಸು, ಧೈರ್ಯ, ಶ್ರದ್ಧೆ...

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...