ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದ ಯದುವೀರ್ ಒಡೆಯರ್

By
0 Min Read

ಮೈಸೂರು: ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಮೈಸೂರಿನ ಶಂಕರಮಠ ರಸ್ತೆಯಲ್ಲಿರುವ ಶ್ರೀಕಾಂತ ಶಾಲೆಯಲ್ಲಿ ವೋಟಿಂಗ್ ಮಾಡಿದ್ದಾರೆ. ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು. ಇದಕ್ಕೂ ಮುನ್ನ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ಇನ್ನೂ ಪತ್ನಿ ತ್ರಿಶಿಕಾ, ತಾಯಿ ಪ್ರಮೋದಾ ದೇವಿ ಅವರಿಂದಲೂ ಮತದಾನ ಮತದಾನ ಮಾಡಲಾಯಿತು. ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಶುರುವಾಗಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ಉತ್ಸಾಹದಿಂದ ಬಂದು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.

Share This Article