ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆಯಲ್ಲಿ ಉದ್ಯೋಗ ಖಾಲಿ ಇದೆ

Date:

ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (KIOCL) 2021-22ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಆಗಸ್ಟ್ 23, 2021ರಂದು ವಾಕ್ ಇನ್ ಸಂದರ್ಶನಕ್ಕೆ ಹಾಜರಾಗಬಹುದು.

ಸಂಸ್ಥೆ ಹೆಸರು: ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (ಕೆಐಒಸಿಎಲ್)
ಒಟ್ಟು ಹುದ್ದೆಗಳು: ವಿವಿಧ
ಹೆಸರು: ಸರ್ವೇಯರ್, ಸಹಾಯಕ ಸರ್ವೇಯರ್
ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಆಗಸ್ಟ್ 23, 2021.

ವಿದ್ಯಾರ್ಹತೆ: ಅರ್ಜಿದಾರರು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ, ಬಿ.ಇ ಹಾಗೂ ಬಿ.ಟೆಕ್ ಪದವಿ. ಸಿವಿಲ್ ಇಂಜಿನಿಯರಿಂಗ್, ಪದವಿ ನಂತರ 2 ವರ್ಷಗಳ ಅನುಭವ, ಅಥವಾ ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್ ಜೊತೆಗೆ 4 ವರ್ಷಗಳ ಅನುಭವ ಹೊಂದಿದ್ದರೆ ಆದ್ಯತೆ. ಇದಲ್ಲದೆ ಮಾನ್ಯತೆ ಪಡೆದ ತಾಂತ್ರಿಕೇತರ ವಿಶ್ವ ವಿದ್ಯಾಲಯದಿಂದ ಶೇ 60ರಷ್ಟು ಅಂಕಗಳೊಂದಿಗೆ ಪದವಿ ಜೊತೆಗೆ 7 ವರ್ಷಗಳ ಕಾರ್ಯ ಕ್ಷೇತ್ರಗಳ ಅನುಭವ ಹೊಂದಿದ್ದರೂ ಆದ್ಯತೆ ಸಿಗಲಿದೆ.

ಇದರ ಜೊತೆಗೆ ಗಣಿಗಾರಿಕೆ ಸರ್ವೇಯರ್ ಬಗ್ಗೆ ಜ್ಞಾನ, ಆಟೋ ಕ್ಯಾಡ್ ಬಗ್ಗೆ ತಿಳುವಳಿಕೆ, ಸ್ಥಳೀಯ ಭಾಷಾ ಜ್ಞಾನ ಇರುವವರಿಗೆ ಆದ್ಯತೆ.  ಸಂಬಳ ವಿವರ: 40,000 ರಿಂದ 50,000/-ರು ಪ್ರತಿ ತಿಂಗಳು.
ಸರ್ವೇಯರ್: 50,000ರು
ಸಹಾಯಕ ಸರ್ವೇಯರ್: 40, 000ರು

 

ವಯೋಮಿತಿ: ಗರಿಷ್ಠ ವಯಸ್ಸು 35 ವರ್ಷ(ಜೂನ್ 30, 2021ರಂತೆ)
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ ಹಾಗೂ ಎಸ್ ಸಿ ಹಾಗೂ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ತನಕ ವಿನಾಯಿತಿ ಇರುತ್ತದೆ.

ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ

ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ. ಆಯ್ಕೆಯಾದ ಅಭ್ಯರ್ಥಿಗಳು ಮೂರು ವರ್ಷಗಳ ಗುತ್ತಿಗೆ ಆಧಾರಿತ ನೇಮಕಾತಿಗೆ ಸಹಿ ಹಾಕಬೇಕಾಗುತ್ತದೆ.

ಪ್ರಮುಖ ದಿನಾಂಕ:
ವಾಕ್ ಇನ್ ಸಂದರ್ಶನ ದಿನಾಂಕ: 23/08/2021.
ಸಮಯ: ಬೆಳಗ್ಗೆ 9.30 ರಿಂದ 10.30 ರ ವೇಳೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು.

ಸಂದರ್ಶನಕ್ಕೆ ಆಗಮಿಸುವುದಕ್ಕೂ ಮುನ್ನ ಅಗತ್ಯ ದಾಖಲೆಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಹಾಜರಾಗತಕ್ಕದ್ದು.
ಹೋಟೆಲ್ ಪಿಬಿಎಸ್ ಗ್ರ್ಯಾಂಡ್,
ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಎದುರು
ಪಟೇಲ್ ನಗರ
ಹೊಸಪೇಟೆ- 583201

 

 

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...