ಕೆಂಪೇಗೌಡ ಕಟ್ಟಿದ ಬೆಂಗಳೂರನ್ನ ಛಿದ್ರ ಮಾಡೋಕೆ ಕಾಂಗ್ರೆಸ್ ಹೊರಟಿದೆ: ಛಲವಾದಿ ನಾರಾಯಣಸ್ವಾಮಿ

tnit editors
1 Min Read

ಕೆಂಪೇಗೌಡ ಕಟ್ಟಿದ ಬೆಂಗಳೂರನ್ನ ಛಿದ್ರ ಮಾಡೋಕೆ ಕಾಂಗ್ರೆಸ್ ಹೊರಟಿದೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕೆಂಪೇಗೌಡ ಕಟ್ಟಿದ ಬೆಂಗಳೂರನ್ನ ಛಿದ್ರ ಮಾಡೋಕೆ ಕಾಂಗ್ರೆಸ್ ಹೊರಟಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಮಾಡಿ ಕೆಂಪೇಗೌಡ ಕಟ್ಟಿದ ಬೆಂಗಳೂರನ್ನ ಛಿದ್ರ ಮಾಡೋಕೆ ಕಾಂಗ್ರೆಸ್ ಹೊರಟಿದೆ.
ಬೆಂಗಳೂರನ್ನ ಒಗ್ಗಟ್ಟಾಗಿ ಇಡೋ ಕೆಲಸ ಆಗಬೇಕು. ವಿಚಿತ್ರಕಾರಿ ಜನ ಬೆಂಗಳೂರಿಗೆ ಬಂದು ಹಾಳು ಮಾಡಿದ್ದು ಆಯ್ತು. ಬೆಂಗಳೂರನ್ನ ಸುಭದ್ರಗೊಳಿಸಬೇಕು. ಅದು ಬಿಟ್ಟು 6, 7 ಭಾಗ ಮಾಡ್ತೀವಿ. 6 ಮೇಯರ್ ಮಾಡ್ತೀವಿ ಅನ್ನೋದು ಸರಿಯಲ್ಲ. ಗ್ರೇಟರ್ ಬೆಂಗಳೂರಿಗೆ ನಮ್ಮ ವಿರೋಧ ಇದೆ ಎಂದರು‌.
ಬೆಂಗಳೂರನ್ನ ಹಾಗೆ ಮಾಡ್ತೀವಿ ಹೀಗೆ ಮಾಡ್ತೀವಿ ಅಂತ ಸುಳ್ಳು ಹೇಳಿ ಅಧಿಕಾರಕ್ಕೆ ಬಂದವರು ಇವರು.ಅವರು ಕೊಟ್ಟ ಗ್ಯಾರಂಟಿಗೆ ವಾರಂಟಿ ಇಲ್ಲದ ಹಾಗೇ ಆಗಿದೆ.ಇವರು ನಮ್ಮನ್ನ ಗ್ಯಾರಂಟಿ ಒಂದೇ ಕಾಪಾಡುತ್ತೆ ಅಂತ ಅಂದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

Share This Article